udayanews

ಶುಕ್ರವಾರ, ಜನವರಿ 22, 2021

ಚಿಕ್ಕಮಗಳೂರು ನಗರಸಭೆ :ಮೀಸಲಾತಿ ಪ್ರಕಟ



 ಚಿಕ್ಕಮಗಳೂರು: ನಗರಸಭೆ ವಾರ್ಡ್ ಮೀಸಲಾತಿ  ಕೊನೆಗೂ ಪ್ರಕಟವಾಗಿದೆ .ಈ ಹಿಂದೆ ಮೀಸಲಾತಿ ಪ್ರಕಟವಾಗಿದ್ದ ಸಂದರ್ಭದಲ್ಲಿ ಆಡಳಿತ ಬಿಜೆಪಿಯ ಕೆಲವರು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು . 

ಇದರಿಂದಾಗಿ ಕಳೆದ 2ವರ್ಷಗಳಿಂದ ನಗರಸಭೆಗೆ ಚುನಾವಣೆ ನಡೆಯದೆ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದವು.

ಕೊನೆಗೂ ಮೀಸಲಾತಿ ಪ್ರಕಟವಾಗಿದ್ದು' ಸದ್ಯದಲ್ಲೇ ಚುನಾವಣೆ ನಡೆಯುವ ನಿರೀಕ್ಷೆಯೂ ಇದೆ .ಜಿಲ್ಲಾ ಕೇಂದ್ರ ಅಭಿವೃದ್ಧಿ ಕಾರ್ಯಗಳಲ್ಲಿ ತೀವ್ರ ಹಿನ್ನಡೆ ಸಾಧಿಸಿದ್ದು , ನಗರಸಭೆ ಚುನಾವಣೆಯಲ್ಲಿ ಹಿನ್ನಡೆ ಆಗುವ ಸಾಧ್ಯತೆಗಳು  ಇರುವುದನ್ನು ಗಮನಿಸಿ ಆಡಳಿತ ಪಕ್ಷದವರು ಉದ್ದೇಶಪೂರ್ವಕವಾಗಿ ನ್ಯಾಯಾಲಯದಿಂದ ತಡೆ ತಂದಿದ್ದರು  ಎನ್ನುವ ಆರೋಪವೂ ಇದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ