udayanews

ಶನಿವಾರ, ಫೆಬ್ರವರಿ 6, 2021

ಕೃಷಿ ಕಾಯ್ದೆ ವಿರೋಧಿಸಿ ರಕ್ತದಲ್ಲಿ ಸಹಿ ಹಾಕಿ ಪತ್ರ ಚಳವಳಿ



 ಚಿಕ್ಕಮಗಳೂರು: ರೈತರ ಪಾಲಿಗೆ ಮರಣ ಶಾಸನವಾಗಿರುವ ಕೃಷಿ  ಕಾಯ್ದೆಯನ್ನು ತಕ್ಷಣ ರದ್ದುಪಡಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ರಕ್ತ ಸಹಿ ಪತ್ರ ಚಳವಳಿ ನಡೆಯಿತು .

ಆಲ್ದೂರು ಹೋಬಳಿ ಕಾಫಿ ಬೆಳೆಗಾರರ ಒಕ್ಕೂಟದ ಮುಖಂಡ ವಿಜಯ್ ನೇತೃತ್ವದಲ್ಲಿ ಅಂಚೆ ಕಚೇರಿ ಬಳಿ ಜಮಾಯಿಸಿದ ರೈತರು ಕೃಷಿ ಕಾಯ್ದೆಯನ್ನು ವಿರೋಧಿಸಿ ಪತ್ರಕ್ಕೆ ರಕ್ತದಲ್ಲಿ ಸಹಿ ಮಾಡಿ ಪ್ರಧಾನಿಗೆ ಪತ್ರವನ್ನು ಪೋಸ್ಟ್ ಮಾಡಿದರು .ಇನ್ನೊಂದೆಡೆ ಹಿರೇಮಗಳೂರಿನಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ರಸ್ತೆ  ತಡೆ ಚಳವಳಿ ನಡೆಯಿತು .ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ