udayanews

ಶುಕ್ರವಾರ, ಏಪ್ರಿಲ್ 2, 2021

ಚಿಕ್ಕಮಗಳೂರು:26 ವಿದ್ಯಾರ್ಥಿನಿಯರಲ್ಲಿ ಸೋಂಕು


 ಚಿಕ್ಕಮಗಳೂರು :ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ ಜನರಲ್ಲಿ ಆತಂಕ ಮನೆಮಾಡಿದೆ .

ಇಂದು 47 ಪ್ರಕರಣಗಳು ಬೆಳಕಿಗೆ ಬಂದಿದ್ದು ಅದರಲ್ಲಿ 26 ವಿದ್ಯಾರ್ಥಿನಿಯರಿಗೆ ಸೋಂಕು ಇರುವುದು  ದೃಢಪಟ್ಟಿದ್ದು ಜನ ಗಾಬರಿಗೊಳ್ಳುವಂತೆ ಮಾಡಿದೆ .

ಬಸವನಹಳ್ಳಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಮೊದಲು ಸೋಂಕು ಕಾಣಿಸಿಕೊಂಡಿತ್ತು .ಆಕೆಯಿಂದಲೇ ಉಳಿದವರಿಗೂ ಹಬ್ಬಿರುವ ಶಂಕೆ ವ್ಯಕ್ತವಾಗಿದೆ . 

ಶೃಂಗೇರಿ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರಲ್ಲಿ ಸೋಂಕು ಕಾಣಿಸಿಕೊಂಡಿದೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ