udayanews

ಮಂಗಳವಾರ, ಏಪ್ರಿಲ್ 6, 2021

ಚಿಕ್ಕಮಗಳೂರು :ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಆರಂಭ


 ಚಿಕ್ಕಮಗಳೂರು :ನಗರದ ಎಲ್ಲೆಂದರಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದರು .

ಬೀದಿ ನಾಯಿಗಳ ಹಾವಳಿಯಿಂದ ಬೇಸತ್ತ ಜನ ನಗರಸಭೆಗೆ ದೂರನ್ನು ಸಲ್ಲಿಸಿದ್ದರು. ಸಾರ್ವಜನಿಕರ ದೂರು ಆಧರಿಸಿ ನಗರಸಭೆ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ಮಾಡಿಸಲು ಆರಂಭಿಸಿದೆ .

ಇಂದಾವರದ ಹೊರವಲಯದಲ್ಲಿ ಈ ಕೆಲಸ ನಡೆಯುತ್ತಿದ್ದು ಸಂತಾನಹರಣ ಚಿಕಿತ್ಸೆಗೆ ಒಳಗಾದ ನಾಯಿಗಳನ್ನು 4ದಿನಗಳ ಬಳಿಕ ಬಿಡಲಾಗುವುದು ಎಂದು ನಗರಸಭೆ ಆಯುಕ್ತ ಬಸವರಾಜ್  ತಿಳಿಸಿದ್ದಾರೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ