udayanews

ಮಂಗಳವಾರ, ಡಿಸೆಂಬರ್ 6, 2022

ditiyotyods9y

 



ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ.
ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ಆವರಣದಿಂದ ಭಜನೆ ,ಮಹಿಳೆಯರ ಚಂಡೇವಾದನ , ದತ್ತ ವಿಗ್ರಹಗಳೊಂದಿಗೆ ಹೊರಟ ಮಹಿಳೆಯರ ಸಂಕೀರ್ತನ ಯಾತ್ರೆ ಪಾಲಿ ಟೆಕ್ನಿಕ್ ವರೆಗೆ ತಲುಪಿತು.
ಅಲ್ಲಿಂದ ಪೀಠಕ್ಕೆ ತೆರಳಿದ ಮಹಿಳೆಯರು ಗುಹೆಯೊಳಗೆ ತೆರಳಿ ದತ್ತ ಪಾದುಕೆ ದರ್ಶನ ಪಡೆದು ಅನುಸೂಯ ದೇವಿ ಪೂಜೆ ಸಲ್ಲಿಸಿದರು. ಹೋಮ ಇತರೆ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.
ಶೋಭಾಯಾತ್ರೆ: ದತ್ತಜಯಂತಿ ಅಂಗವಾಗಿ ನಾಳೆ ಚಿಕ್ಕಮಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ವಿವಿಧ ಜಾನಪದ ತಂಡಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಜರುಗಲಿದೆ.
ಶೋಭಾಯಾತ್ರೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಶಾಸಕ ಸಿಟಿ ರವಿ ಆರೋಪ: ದತ್ತ ಜಯಂತಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಬೇಕು ಎನ್ನುವ ಉದ್ದೇಶದಿಂದ ಕೆಲವು ದುಷ್ಕರ್ಮಿಗಳು  ಗಿರಿ ರಸ್ತೆಯ ತಿರುವುಗಳಲ್ಲಿ ಮಳೆಗಳನ್ನು ಹೊಡೆದಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದಿದ್ದಾರೆ.
ಚಿತ್ರಗಳು: ತಾರಾನಾಥ್ ಕಾಮತ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ