udayanews

ಶುಕ್ರವಾರ, ಮಾರ್ಚ್ 12, 2021

ಸಿಡಿ ಪ್ರಕರಣದಲ್ಲಿ ಆಲ್ದೂರು ಯುವಕ ವಶಕ್ಕೆ :ಜಿಲ್ಲೆಯಲ್ಲಿ ಸಂಚಲನ


 ಚಿಕ್ಕಮಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಆಲ್ದೂರಿನ  ಯುವಕನೊಬ್ಬನನ್ನು  ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ .

ಸಹಜವಾಗಿ ಇದು ಜಿಲ್ಲೆಯಲ್ಲಿ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದ್ದು ,  ಈ ಯುವಕ ಯಾರು ಎನ್ನುವ ಚರ್ಚೆ ಎಲ್ಲೆಡೆ ಕೇಳಿಬರುತ್ತಿವೆ .

ಆಲ್ದೂರು  ಪಟ್ಟಣದ ಗ್ರಾಮ ಪಂಚಾಯ್ತಿ  ಮಾಜಿ ಪದಾಧಿಕಾರಿಯ ಪುತ್ರ  ಎನ್ನಲಾಗಿದ್ದು ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಎಂದು ಹೇಳಲಾಗುತ್ತಿದೆ .  ಯುವಕ ಬೆಂಗಳೂರಿನಲ್ಲಿ ನೆಲೆಸಿದ್ದ .

ಜಿಲ್ಲೆಯ ಇನ್ನಷ್ಟು ಯುವಕರು ಖೆಡ್ಡಾಕ್ಕೆ ಬೀಳುವ ಸಾಧ್ಯತೆಗಳು ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ .

ರಾಜ್ಯದಲ್ಲಿ ಬೆಳಕಿಗೆ ಬರುವ ಬಹುತೇಕ ಗಂಭೀರ ಪ್ರಕರಣಗಳಲ್ಲಿ ಜಿಲ್ಲೆಯ ಯುವಕರು ಥಳಕು ಹಾಕಿಕೊಳ್ಳುತ್ತಿರುವುದು   ಸಾಮಾನ್ಯವಾಗಿದೆ .


ಗುರುವಾರ, ಮಾರ್ಚ್ 11, 2021

ಮಲೆನಾಡಿಗೆ ಮಾರಕ ಯೋಜನೆಗಳು: ಸರಣಿ ಸಭೆಗೆ ನಿರ್ಧಾರ


 ಚಿಕ್ಕಮಗಳೂರು :ಜಿಲ್ಲೆಯ ಮಲೆನಾಡ ಭಾಗವನ್ನು ಕಾಡುತ್ತಿರುವ ಮುಳ್ಳಯ್ಯನಗಿರಿ  ಮೀಸಲು ಅರಣ್ಯ , ಹುಲಿ ಸಂರಕ್ಷಣಾ ರೋಜನೆ, ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರದ ಸ್ಪಷ್ಟ ನಿಲುವಿಗೆ ಒತ್ತಾಯಿಸಿ ಸರಣಿ ಸಭೆಗಳು ಆರಂಭವಾಗಿದೆ .

ಮುಳ್ಳಯ್ಯನಗಿರಿ ,ಜಾಗರ, ಕೊಳಗಾಮೆ ,ಖಾಂಡ್ಯ, ಸಂಗಮೇಶ್ವರಪೇಟೆ  ಸೇರಿದಂತೆ ಹಲವು ಗ್ರಾಮಗಳ ಜನರು ಈಗಾಗಲೇ ವಿವಿಧ ಹಂತಗಳಲ್ಲಿ ಹೋರಾಟಗಳನ್ನು ಮಾಡಿದ್ದಾರೆ .

ಗ್ರಾಮ ಪಂಚಾಯ್ತಿ ಚುನಾವಣೆಗಳನ್ನು ಮೊದಲ ಹಂತದಲ್ಲಿ ಬಹಿಷ್ಕರಿಸಲಾಗಿದ್ದುಎರಡನೇ ಹಂತದ ಚಹನಾವಣೆ ದಿನಾಂಕ ಪ್ರಕಟವಾಗಿದ್ದು ಮುಂದಿನ ನಿರ್ಧಾರ  ಕುರಿತು ಚರ್ಚಿಸಲು ಸಭೆಗಳು ನಡೆಯುತ್ತಿವೆ .

ಮಲೆನಾಡ ಜನರ ಬದುಕಿಗೆ ಮಾರಕವಾಗಿರುವ ಈ ಯೋಜನೆಗಳ ಬಗ್ಗೆ ಸರ್ಕಾರ ಹಾಗೂ ನ್ಯಾಯಾಲಯದಿಂದ ಈವರೆಗೂ ಯಾವುದೇ ಸ್ಪಷ್ಟ ಆದೇಶ ಬಾರದಿರುವುದು ಜನರನ್ನು ಆತಂಕಕ್ಕೆ ದೂಡಿದೆ .

ಈ ಮಧ್ಯೆ ಚುನಾವಣೆ ಬಹಿಷ್ಕರಿಸುವ ನಿಟ್ಟಿನಲ್ಲಿ ಕೆಲವು ಗ್ರಾಮಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು , ಒಂದೊಮ್ಮೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ .



ಟಾಯ್ಲೆಟ್ ಮುಂದೆ ಸೆಲ್ಫಿ !!


 ಚಿಕ್ಕಮಗಳೂರು :ಶೀರ್ಷಿಕೆ ನೋಡಿ ಅಚ್ಚರಿಯಾಗಬಹುದು .

ತರೀಕೆರೆಯ ಸಾರ್ವಜನಿಕ ಶೌಚಾಲಯ ನೋಡಿದಾಗ ಯಾರಿಗಾದರೂ 1ಸೆಲ್ಫಿ ತೆಗೆದುಕೊಳ್ಳುವ ಮನಸ್ಸಾಗದೆ ಇರದು .

ಸಾರ್ವಜನಿಕ ಶೌಚಾಲಯಗಳೆಂದರೆ ಮೂಗು ಮುಚ್ಚಿಕೊಂಡು ಹೋಗಬೇಕಾದ ಸ್ಥಿತಿ ಇಂದಿಗೂ ಇದೆ . ನಿರ್ವಹಣೆ ಕೊರತೆ ಇದಕ್ಕೆ ಮುಖ್ಯ ಕಾರಣ .

ತರೀಕೆರೆಯಲ್ಲಿ ಇರುವ ಸಾರ್ವಜನಿಕ 11 ಶೌಚಾಲಯಗಳು ಇದಕ್ಕೆ ಭಿನ್ನ .  ಆಕರ್ಷಕ ಬಣ್ಣ ಹೊಡೆದು ಪ್ರಾಣಿ ಪಕ್ಷಿ ಸೇರಿದಂತೆ ವಿವಿಧ ಚಿತ್ತಾರಗಳನ್ನು ಬಿಡಿಸಿದ್ದು ಸಾರ್ವಜನಿಕರ ಗಮನ ಸೆಳೆಯುತ್ತಿವೆ .

ಹೊರಗಷ್ಟೇ ಸುಂದರವಲ್ಲ .ಒಳಗೂ ಅಚ್ಚುಕಟ್ಟಾಗಿ ಶುಚಿತ್ವ ಕಾಪಾಡಲಾಗಿದೆ.     ಶೌಚಾಲಯ ಬಳಸಿದವರು ಸೆಲ್ಫಿ ತೆಗೆದುಕೊಂಡು ಹೋಗುವುದು ಸಾಮಾನ್ಯ  .ಇದರ ಹಿಂದಿನ ರೂವಾರಿ ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಮತ್ತವರ ಸಿಬ್ಬಂದಿ.


 

ಬುಧವಾರ, ಮಾರ್ಚ್ 10, 2021

ಸಿಡೀ ಹಗರಣ :ಕಾನೂನು ತಂದರೆ ವಿಧಾನಸೌಧದಲ್ಲಿ ಕೊಠಡಿ ಬುಕ್ -ಮಲಾಲಿ ವ್ಯಂಗ್ಯ


 ಚಿಕ್ಕಮಗಳೂರು: ರಾಸಲೀಲೆ ಸೇರಿದಂತೆ ರಾಜಕಾರಣಿಗಳ ವಿರುದ್ಧ ಸುಳ್ಳು ಆರೋಪ ಹೊರಿಸಿ ಸೀಡಿಗಳನ್ನು ಬಿಡುಗಡೆ ಮಾಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುವುದರಲ್ಲಿ ಯಾವುದೇ ಅರ್ಥ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮಲಾಲಿ ಅಭಿಪ್ರಾಯಿಸಿದ್ದಾರೆ .

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಇಂತಹ ಕಾನೂನುಗಳು ರಾಜಕಾರಣಿಗಳಿಗೆ ಪರವಾನಿಗೆ ನೀಡಿದಂತೆ ಆಗುತ್ತದೆ. ಮುಂದೆ ಇಂಥ ಕೃತ್ಯಗಳಿಗೆ ವಿಧಾನ ಸೌಧದಲ್ಲಿ ಕೊಠಡಿಗಳನ್ನು ಕಾದಿರಿಸುತ್ತಾರೆ ಎಂದು ವ್ಯಂಗ್ಯವಾಡಿದರು .

ವೇಶ್ಯಾವಾಟಿಕೆಯನ್ನು ಮೊದಲು ನಿಲ್ಲಿಸಬೇಕು ರಾಜಕಾರಣಿಗಳು ತಮ್ಮ ಮನೆ ,ಕುಟುಂಬ ,ಸಾಮಾಜಿಕ ಜೀವನದ ಬಗ್ಗೆ ಯೋಚನೆ ಮಾಡುವುದು ಅಗತ್ಯ .ಕೆಲವು ರಾಜಕಾರಣಿಗಳಿಗೆ ಇದೊಂದು ಹವ್ಯಾಸವಾಗಿ ಹೋಗಿದೆ.ಈವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ  ಎಂದು ಬೇಸರ ಹೊರಹಾಕಿದರು .

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ದೊಡ್ಡ ದುರಂತ ಈ ಘಟನೆಯ ಹಿಂದೆ ದೊಡ್ಡ ಷಡ್ಯಂತ್ರವಿದೆ ,ಯಾರನ್ನೊ  ಹಣಿಯಬೇಕು, ರಾಜೀನಾಮೆ ಕೊಡಿಸಬೇಕು ಎನ್ನುವ ಉದ್ದೇಶದಿಂದ ವ್ಯವಸ್ಥಿತವಾಗಿ ಮಾಡಿದ ಪಿತೂರಿ ಎಂದು ಟೀಕಿಸಿದರು .

ಸುಳ್ಳು ಆರೋಪ ಹೊರಿಸಿ ಈ ರೀತಿ ಮಾಡುವವರ ವಿರುದ್ಧ ಮೊಕದ್ದಮೆ ಹೂಡುವುದು ಸ್ವಾಗತಾರ್ಹ .ಖಾಸಗಿ ವ್ಯಕ್ತಿತ್ವ  ಹಾಳು ಮಾಡುವುದನ್ನು ನಿಲ್ಲಿಸಬೇಕು .ಕಾನೂನಿನಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು .

ಮಂಗಳವಾರ, ಮಾರ್ಚ್ 9, 2021

ಜನಪ್ರತಿನಿಧಿಗಳ ರಾಜೀನಾಮೆಗೆ ಜೆಡಿಎಸ್ ಆಗ್ರಹ


 ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಗಳು ಇದ್ದರೂ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಅವರಿಗೆ ಕಾಳಜಿ ಇಲ್ಲದಿರುವುದರಿಂದ ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್ ಎಚ್ ದೇವರಾಜ್ ಒತ್ತಾಯಿಸಿದ್ದಾರೆ .

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಪ್ರಭಾವಿಗಳು. ಆದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾತ್ರ ಶೂನ್ಯ ಎಂದು ವ್ಯಂಗ್ಯವಾಡಿದ ಅವರು ಇವರು ಕೇವಲ ಭಾಷಣಕ್ಕೆ ಸೀಮಿತರಾಗಿದ್ದಾರೆ ಎಂದು ಟೀಕಿಸಿದ್ದಾರೆ .

ರಾಜ್ಯ ಬಜೆಟ್ ನಲ್ಲಿ  ಜಿಲ್ಲೆಗೆ ಆದ್ಯತೆ ನೀಡದೆ ನಿರಾಸೆಯಾಗಿದೆ .  ವೈದ್ಯಕೀಯ , ಎಂಜಿನಿಯರಿಂಗ್ ಕಾಲೇಜು ಇನ್ನಿತರೆ ಯೋಜನೆಗಳ ಪ್ರಸ್ತಾವವೂ ಇಲ್ಲ ಎಂದು ಛೇಡಿಸಿದರು .

ಕ್ಷೇತ್ರದ ಶಾಸಕ ಸಿ ಟಿ ರವಿ ತಮಿಳುನಾಡಿನ ಉಸ್ತುವಾರಿಯನ್ನು ಹೊತ್ತಿದ್ದು ಗೊತ್ತಿಲ್ಲದ ಭಾಷೆಯಲ್ಲಿ ಮಾತನಾಡಿ ಕ್ಷೇತ್ರದ ಜನ ತಲೆತಗ್ಗಿಸುವಂತೆ ಮಾಡುತ್ತಿದ್ದರೆಂದು ವಿಷಾದಿಸಿದರು . 

ಗುರುವಾರ, ಮಾರ್ಚ್ 4, 2021

ಧರ್ಮದ ಆಧಾರದಲ್ಲಿ ತಾರತಮ್ಯ ಸಲ್ಲದು :ದೇವಜ್ಯೋತಿ ರೇ


 ಚಿಕ್ಕಮಗಳೂರು,ಮಾ.೦೪: ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡದೆ  ಜನತೆಯನ್ನು ಸಮಾನವಾಗಿ ಕಾಣುವಂತೆ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ದೇವಜ್ಯೋತಿ ರೇ ಹೇಳಿದರು.

 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ನಡೆದ ೧೩ನೇ ತಂಡದ ೪ನೇ 67 ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿ

 


ಕಾನೂನಿನ ಅಡಿಯಲ್ಲಿ ಸಮರ್ಪಕವಾಗಿ  ಕಾರ್ಯ ನಿರ್ವಹಿಸಬೇಕು ಎಂದರು 

ಬುಧವಾರ, ಮಾರ್ಚ್ 3, 2021

ಮುಳ್ಳಯ್ಯನಗಿರಿ ರಕ್ಷಿತ ಅರಣ್ಯ ಘೋಷಣೆ ವಿರೋಧಿಸಿ ಮತ್ತೆ ಪ್ರತಿಭಟನೆ


 ಚಿಕ್ಕಮಗಳೂರು :ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಮತ್ತೆ ಪ್ರತಿಭಟನೆ ನಡೆದಿದೆ .

ಮುಳ್ಳಯ್ಯನಗಿರಿ ವ್ಯಾಪ್ತಿಯ ಗ್ರಾಮಸ್ಥರುವಿವಿಧ ಪಕ್ಷ ಸಂಘಟನೆಗಳ ಆಶ್ರಯದಲ್ಲಿ ಚಿಕ್ಕಮಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು  .

ಮುಳ್ಳಯ್ಯನಗಿರಿ ಮೀಸಲು ಅರಣ್ಯ ವಿರೋಧಿ ಹೋರಾಟ ಸಮಿತಿಯ ಆಶ್ರಯದಲ್ಲಿ ಪ್ರತಿಭಟನಾ ಸಭೆ ನಡೆದು ಸರ್ಕಾರ ಈ ಪ್ರಸ್ತಾವನೆಯನ್ನು ಕೈಬಿಡುವಂತೆ ಒತ್ತಾಯಿಸಿದರು .

ಉದ್ದೇಶಿತ ಪ್ರಸ್ತಾವನೆಯಿಂದ ಈ ಭಾಗದ ಗ್ರಾಮಸ್ಥರ ಬದುಕಿನ ಮೇಲೆ ಗಂಭೀರ ಪರಿಣಾಮ ಎದುರಾಗಲಿದೆ .ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಕಾನೂನು ಜಾರಿ ನೆಪದಲ್ಲಿ ಜನರಿಗೆ ಕಿರುಕುಳ ನೀಡುವ ಸಾಧ್ಯತೆ ಇದೆ ಎಂದು ಆರೋಪಿಸಿದರು .