udayanews

ಮಂಗಳವಾರ, ಮಾರ್ಚ್ 16, 2021

ಪಶ್ಚಿಮಘಟ್ಟಕ್ಕೆ ವಿಶೇಷ ಸ್ಥಾನಮಾನ -ಎಲ್ ಶಂಕರ್ ಪ್ರತಿಪಾದನೆ


 ಚಿಕ್ಕಮಗಳೂರು: ಪಶ್ಚಿಮಘಟ್ಟ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೋರಾಟ ರೂಪಿಸುವ ಅಗತ್ಯವಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ  ಬಿ. ಎಲ್. ಶಂಕರ್ ಪ್ರತಿಪಾದಿಸಿದ್ದಾರೆ .

ಪೂರ್ವೋತ್ತರ ರಾಜ್ಯಗಳಿಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ಪಶ್ಚಿಮಘಟ್ಟ ಪ್ರದೇಶಕ್ಕೆ ನೀಡುವ ಅಗತ್ಯವಿದೆ. ದೀರ್ಘ ಕಾಲದ ಹೋರಾಟಕ್ಕೆ ಪೀಠಿಕೆ ಹಾಕುವ ಅಗತ್ಯವಿದ್ದು ಈ ಕುರಿತು ವಿಧಾನಸಭಾಧ್ಯಕ್ಷರು ವಿಶೇಷ ಸಭೆ ಕರೆಯಲು ಮುಂದಾಗಿದ್ದಾರೆ ಎಂದರು .

ಉತ್ತರ ಭಾರತದ 6 ರಾಜ್ಯಗಳು ವಿಶೇಷ ವಲಯಕ್ಕೆ ಸೇರ್ಪಡೆಗೊಂಡು ವಿಶೇಷ ಸ್ಥಾನಮಾನವನ್ನು ಪಡೆದಿದೆ .ತೆರಿಗೆ ಹಾಗೂ ಜನಪ್ರಾತಿನಿಧ್ಯ ದಲ್ಲೂ ವಿನಾಯಿತಿ ಇದ್ದು ಈ ರೀತಿಯ ವಿನಾಯಿತಿಗಳು ಪಶ್ಚಿಮಘಟ್ಟ ಪ್ರದೇಶಕ್ಕೆ ಸಲ್ಲಬೇಕಾಗಿದೆ ಎಂದು ಹೇಳಿದರು .

ಕಾಯಿದೆ ಅಗತ್ಯ :ಸರ್ಫೆಸಿ ಕಾಯಿದೆಯಿಂದ ಕಾಫಿ ಉದ್ಯಮಕ್ಕೆ ದೊಡ್ಡ ಹೊಡೆತ ಬೀಳುತ್ತಿದ್ದು ಉದ್ಯಮದ ರಕ್ಷಣೆಗೆ ಹೊಸ ಕಾಯ್ದೆ ರೂಪಿಸಲು ಕೇಂದ್ರ ಮೇಲೆ ಒತ್ತಡ ತರಬೇಕಾದ ಅಗತ್ಯತೆ ಇದೆ ಎಂದು ತಿಳಿಸಿದರು .

ಶೃಂಗೇರಿಯಲ್ಲಿ ಸರ್ಕಾರಿ ಜಾಗ ಮಾರಾಟ: 7ಜನರ ವಿರುದ್ಧ ಪ್ರಕರಣ


 ಚಿಕ್ಕಮಗಳೂರು :ನದಿಪಾತ್ರದ ಖರಾಬು ಜಮೀನು ಮಾರಾಟ ಹಾಗೂ ನೋಂದಣಿ ಮಾಡಿದ ಆರೋಪದ ಮೇಲೆ ಶೃಂಗೇರಿ ಠಾಣೆಯಲ್ಲಿ 7ಜನರ ವಿರುದ್ಧ ಪ್ರಕರಣ ದಾಖಲಾಗಿದೆ .

ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಮೇಲೆ ವಿ ಎಂ ಬೆಳ್ಳಚ್ಚಾರ್ ಹಾಗೂ ಖರೀದಿ ಮಾಡಿದ ಆರೋಪದಡಿ ಕಲ್ಮಕ್ಕಿ ಪ್ರದೀಪ್ ಮೇಲೆ ಪ್ರಕರಣ ದಾಖಲಾಗಿದೆ .

ನೋಂದಣಿ ಮಾಡಿದ ಆರೋಪದಡಿ ಕೊಪ್ಪ ಉಪ ನೋಂದಣಾಧಿಕಾರಿ ಎಸ್ ಅನಿತಾ , ಕಂಪ್ಯೂಟರ್ ನಿರ್ವಾಹಕರಾದ ಎಚ್ ಎನ್  ಕಿರಣ್ ,ನೇತ್ರಾವತಿ ಸಾಕ್ಷಿದಾರರಾದ ಅಗಸನಹಳ್ಳಿ ಬಿ ವಿ ಭಾಸ್ಕರ್, ಎಸ್ ಕುಮಾರ್ ವಿರುದ್ಧ  ದೂರು ದಾಖಲಾಗಿರುವುದನ್ನು ಉಪನೋಂದಣಾಧಿಕಾರಿ ಚಲುವರಾಜ್ ಖಚಿತಪಡಿಸಿದ್ದಾರೆ .

2016 ಡಿಸೆಂಬರ್ 12 ರಂದು ಶೃಂಗೇರಿ ಉಪನೋಂದಣಿ ಕಚೇರಿಯಲ್ಲಿ  ನದಿಪಾತ್ರದ ಖರಾಬು ಜಮೀನನ್ನು ನೋಂದಣಿ ಮಾಡಲಾಗಿತ್ತು .

ಸೋಮವಾರ, ಮಾರ್ಚ್ 15, 2021

ಬಿಎಸ್ಸೆನ್ನೆಲ್ ಕಚೇರಿಗೆ ಬೆಂಕಿ: ಸುಟ್ಟು ಕರಕಲಾದ ಕೇಬಲ್ ಗಳು


 ಚಿಕ್ಕಮಗಳೂರು :ಒಣಗಿದ ತರಗೆಲೆಗಳಿಗೆ ಹಚ್ಚಿದ ಬೆಂಕಿ ಇಲ್ಲಿನ ದೂರವಾಣಿ ಮುಖ್ಯಕಚೇರಿಗೆ ಪಸರಿಸಿ ಭಾರಿ ಪ್ರಮಾಣದ ಕೇಬಲ್ ಗಳು ಸುಟ್ಟು ಕರಕಲಾಗಿವೆ 

ಬೆಲ್ಟ್  ರಸ್ತೆಗೆ ಹೊಂದಿಕೊಂಡಂತಿರುವ ದೂರಸಂಪರ್ಕ ಇಲಾಖೆಯ ಮುಖ್ಯ ಕಚೇರಿ ಬಳಿ ಸಾಕಷ್ಟು ತರಗೆಲೆಗಳು ಬಿದ್ದಿದ್ದವು .ಅದಕ್ಕೆ ಯಾರೊ ಬೆಂಕಿ ಹಚ್ಚಿದ್ದಾರೆ .

ಬ ಗಾಳಿಯ ರಭಸಕ್ಕೆ ವೇಗವಾಗಿ ಉರಿದು  ಜ್ವಾಲೆಗಳು ಪಕ್ಕದಲ್ಲೇ ಇದ್ದ ದೂರಸಂಪರ್ಕ ಇಲಾಖೆಗೂ ಪಸರಿಸಿದೆ . ಅಲ್ಲಿ ಶೇಖರಿಸಿಟ್ಟಿದ್ದ ಭಾರಿ ಪ್ರಮಾಣದ ಕೇಬಲ್ ಗಳನ್ನು ಅಗ್ನಿ ಆಹುತಿ ಪಡೆದಿದೆ .

ಕಟ್ಟಡ  ಭದ್ರವಾಗಿದ್ದ ಹಿನ್ನೆಲೆಯಲ್ಲಿ ಬೆಂಕಿ ಒಳಗೆ ಆವರಿಸಿಲ್ಲ . ಇದರಿಂದಾಗಿ ಉಪಕರಣಗಳಿಗೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ .  

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ . ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಾಗಿದೆ 

ನಗರಸಭೆಗೆ ಚುನಾವಣೆಗೆ ಒತ್ತಾಯಿಸಿ ಪ್ರತಿಭಟನೆ

 ಚಿ


ಚಿಕ್ಕಮಗಳೂರು .: ನಗರಸಭೆಗೆ ಚುನಾವಣೆ ನಡೆಯದೆ ಎರಡು ವರ್ಷ ಕಳೆದಿದ್ದು ಈ ತಕ್ಷಣ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರಸಭೆ ಎದುರು ಪ್ರತಿಭಟನೆ ಮಾಡಿದರು  

       ಶಾಸಕ ಸಿಟಿ ರವಿ  , ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ  ಮಂಜೇಗೌಡ ಮಾತನಾಡಿ ಶಾಸಕ ಸಿ.ಟಿ ರವಿ  ಮೀಸಲಾತಿ  ವಿರುದ್ಧ ತಮ್ಮ    ಪಕ್ಷದ ಸದಸ್ಯರಿಂದಲೇ ತಡೆಯಾಜ್ಞೆ ತಂದು ಉದ್ದೇಶಪೂರ್ವಕವಾಗಿ ಚುನಾವಣೆ ನಡೆಯದಂತೆ ಮಾಡಿದ್ದಾರೆಂದು ಆರೋಪಿಸಿದರು .

      ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ನಗರಸಭೆ ಮಾಜಿ ಸದಸ್ಯೆ ಸುರೇಖ ಸಂಪತ್ ರಾಜ್ ,    ಮಾಜಿ ಸದಸ್ಯ ರೂಬೆನ್ ಮೊಸಸ್ ಮಾತನಾಡಿ ಸ್ವಂತ ಕ್ಷೇತ್ರವನ್ನು ಸರಿಪಡಿಸಿ ಕೊಳ್ಳಲಾಗದ ಶಾಸಕ ಸಿ.ಟಿ. ರವಿ ಬೇರೆ ರಾಜ್ಯ ಸರಿಪಡಿಸಲು ಹೋರಟಿರುವುದು ಹಾಸ್ಯಾಸ್ಪದ ಎಂದರು.

      ನಗರ ಕಾಂಗ್ರೆಸ್ ಅಧ್ಯಕ್ಷ   ತನೋಜ್ ಮಾತನಾಡಿ  ಕೂಡಲೇ ನಗರಸಭೆ ಚುನಾವಣೆ ನಡೆಸದಿದ್ದರೆ ಮುಂದಿನ ದಿನಗಳಲ್ಲಿ ಶಾಸಕ ಸಿಟಿ ರವಿ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

    ಮಹಿಳಾ ಕಾಂಗ್ರೆಸ್ಸಿನ ರಾಜ್ಯ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಸಿಡಿಎ ಮಾಜಿ ಅಧ್ಯಕ್ಷ ಅನೀಫ್,  ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಿ ಎಂ ಸಂದೀಪ್ ಇತರರು, ಉಪಸ್ಥಿತರಿದ್ದರು.

ತರೀಕೆರೆ ಶಾಸಕರ ದೌರ್ಜನ್ಯ :ಸಿಎಂ ಪುತ್ರನ ಮುಂದೆ ಕುಟುಂಬಸ್ಥರ ಕಣ್ಣೀರು

 ಚಿಕ್ಕಮಗಳೂರು :ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತರೀಕೆರೆ ಕ್ಷೇತ್ರದ ಶಾಸಕ  ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನೊಂದ ಕುಟುಂಬಸ್ಥರು ಸಿಎಂ ಪುತ್ರ ವಿಜಯೇಂದ್ರ ನ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ .



ರೀಕೆರೆ ಲಕ್ಕವಳ್ಳಿ ಸಮೀಪ ಚಿಕ್ಕಮಗಳೂರು ಮೂಲದ ಪ್ರಸನ್ನ 7 ವರ್ಷದ ಹಿಂದೆ  50 ಎಕರೆ  ಜಮೀನು ಖರೀದಿ ಮಾಡಿದ್ದರು.

ಕಳೆದ ಒಂದು ವರ್ಷದಿಂದ ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿರುವ ಬಗ್ಗೆ ಆರೋಪ ಮಾಡಿದ  ಪ್ರಸನ್ನ ಕುಟುಂಬ ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿದರು.

ನ್ಯಾಯ  ಇಲ್ಲವೇ ದಯಾಮರಣ ಕೊಡಿ ಎಂದು ಆಕ್ರೋಶ ಹೊರಹಾಕಿ ಬಿಕ್ಕಿ ಬಿಕ್ಕಿ ಅತ್ತರು .ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ದೂರಿದರು 

ಚಿಕ್ಕಮಗಳೂರು ನಗರದ ಖಾಸಗಿ ಕಾರ್ಯಕ್ರಮದಲ್ಲಿ  ಈ  ಘಟನೆ ನಡೆದಿದ್ದು ವಿಜಯೇಂದ್ರ ಕ್ಷಣಕಾಲ ಮುಜುಗರಕ್ಕೆ ಒಳಗಾದರು .

ಹೆಲಿಕಾಪ್ಟರ್ ಗೆ ಪೊಲೀಸ್ ಕಾವಲು- ವ್ಯಾಪಕ ಟೀಕೆ


 ಚಿಕ್ಕಮಗಳೂರು: ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರ ಹೆಲಿಕಾಪ್ಟರಿಗೆ ಪೋಲಿಸ್ ಕಾವಲು ಹಾಕಿದ ಅಧಿಕಾರಿಗಳ ಕ್ರಮ ಟೀಕೆಗೆ ಗುರಿಯಾಗಿದೆ .ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ಶಾಸಕ ಸಿ .ಟಿ .ರವಿ ತಮಿಳುನಾಡಿನಿಂದ

ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು  .ಐಡಿಎಸ್ ಜಿ ಕಾಲೇಜು ಬಳಿ ಹೆಲಿಕಾಪ್ಟರನ್ನು ನಿಲ್ಲಿಸಿದ್ದು 6 ಕ್ಕೂ ಅಧಿಕ ಪೊಲೀಸರು ಅದನ್ನು ಕಾಯುತ್ತಾ , ಹರಟೆ ಹೊಡೆಯುತ್ತಾ  ನಿಂತಿದ್ದರು .

ಮುಖ್ಯಮಂತ್ರಿಗಳು ಸೇರಿದಂತೆ ಅತಿ ಗಣ್ಯರು ಆಗಮಿಸುವ ಹೆಲಿಕಾಪ್ಟರಿಗೆ ರಕ್ಷಣೆ ನೀಡುವುದು ಸಾಮಾನ್ಯ , ಆದರೆ     ಶಾಸಕರು ಬಂದಿದ್ದ  ಹೆಲಿಕಾಪ್ಟರ್ ಗೆ ಇಷ್ಟೊಂದು ರಕ್ಷಣೆ ನೀಡುವ ಅಗತ್ಯ ಇತ್ತೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅಂತಹ ಅಗತ್ಯತೆ ಇದ್ದಲ್ಲಿ ಖಾಸಗಿ ಭದ್ರತೆಯನ್ನು ನಿಯೋಜಿಸಿ ಕೊಳ್ಳಬೇಕಾಗಿತ್ತು  ಎನ್ನುವ ಮಾತುಗಳು ಕೇಳಿಬರುತ್ತಿವೆ  .

ಸಿಡಿ ಪ್ರಕರಣ :ಡಿಕೆಶಿ ಹೆಸರು ಥಳಕು- ಶಾಸಕ ರವಿ ಅಚ್ಚರಿ

 ಚಿಕ್ಕಮಗಳೂರು :ಸಿಡಿ ಪ್ರಕರಣದಲ್ಲಿ ಡಿಕೆಶಿ ತನ್ನ ಹೆಸರನ್ನ ಯಾಕೆ ಥಳಕು ಹಾಕುತ್ತಿದ್ದಾರೆ ಎನ್ನುವುದು  ಗೊತ್ತಾಗ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ .

ಜಾರಕಿಹೊಳಿ ಸಿಡಿ ಪ್ರಕರಣ  ಕರ್ನಾಟಕ ರಾಜಕಾರಣಕ್ಕೆ ಗೌರವ ತರುವ ವಿಷಯವಲ್ಲ ಎಂದು ಹೇಳಿದ್ದಾರೆ 

ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಕರಣದ ತನಿಖೆಯಾಗಲಿ ಪ್ರೊಡ್ಯೂಸರ್, ಡೈರಕ್ಟರ್, ಆ್ಯಕ್ಟರ್ ಯಾರೆಂದು ಗೊತ್ತಾಗುತ್ತೆ ಎಂದರು .

ಹಿಂದೆ ಮೌಲ್ಯಧಾರಿತ ರಾಜಕೀಯದ ಚರ್ಚೆ ನಡೆಯುತ್ತಿತ್ತು.ಈಗ ಸಿಡಿ ಆಧಾರಿತ ರಾಜಕೀಯದ ಚರ್ಚೆ ನಡೆಯುತ್ತಿದೆ ಎಂದು ಬೇಸರ ಹೊರ ಹಾಕಿದರು.

 ಮೌಲ್ಯಧಾರಿತವೋ... ಸಿಡಿ ಆಧಾರಿತ ರಾಜಕಾರಣ ಬೇಕೋ, ಎಲ್ಲರೂ ಯೋಚಿಸಬೇಕು ಎಂದು ಮಾರ್ಮಿಕವಾಗಿ ಹೇಳಿದರು .


ಸಾರ್ವಜನಿಕ ಜೀವನದಲ್ಲಿರುವ ನಾವು ಪರಿಶುದ್ಧ ರಾಜಕಾರಣದ ಬಗ್ಗೆ ಆಲೋಚಿಸಬೇಕು. ನಮಗೆ ನಾವೇ ಪರಿಮಿತ ಹಾಕಿಕೊಳ್ಳೋದು ಮುಖ್ಯ ಎಂದರು .