ಚಿಕ್ಕಮಗಳೂರು :ಭಾರಿ ಮಳೆಯಿಂದ ಕಳೆದ 2ವರ್ಷಗಳಿಂದ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದ ಚಾರ್ಮಾಡಿ ಘಾಟಿಯಲ್ಲಿ ಕೊನೆಗೂ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ .
udayanews
ಬುಧವಾರ, ಮಾರ್ಚ್ 17, 2021
ಚಾರ್ಮಾಡಿ ಘಾಟಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ
ಚಿಕ್ಕಮಗಳೂರು :ಭಾರಿ ಮಳೆಯಿಂದ ಕಳೆದ 2ವರ್ಷಗಳಿಂದ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದ ಚಾರ್ಮಾಡಿ ಘಾಟಿಯಲ್ಲಿ ಕೊನೆಗೂ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ .
ಹೊಸ ಆಶಯ ಮೂಡಿಸಿರುವ ರೈತ ಪಂಚಾಯತ್
ಚಿಕ್ಕಮಗಳೂರು; ಇದೇ ತಿಂಗಳ ೨೦ ರಂದು ಮಧ್ಯಾಹ್ನ ಶಿವಮೊಗ್ಗದಲ್ಲಿ ನಡೆಯಲಿರುವ ರೈತ ಪಂಚಾಯತ್ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ .
ಕಾರ್ಯಕ್ರಮದ ಯಶಸ್ವಿಗೆ ಸಂಘಟಕರು ಟೊಂಕಕಟ್ಟಿ ನಿಂತಿದ್ದು ಪ್ರತಿ ಹಳ್ಳಿ ಹಳ್ಳಿಗಳಿಗೂ ತಲುಪಿ ಸಭೆಗಳನ್ನು ನಡೆಸುತ್ತಿದ್ದಾರೆ .
ಹೊಸ ಕೃಷಿ ಕಾಯ್ದೆಯ ಸಾಧಕ ಬಾಧಕಗಳನ್ನು ಮನವರಿಕೆ ಮಾಡಿಕೊಡುವ ಕರಪತ್ರಗಳನ್ನು ಹಂಚಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುತ್ತಿದ್ದಾರೆ .
ಐಕ್ಯ ಹೋರಾಟ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದೆ .
ಅಂದು ನಡೆಯುವ ಕಾರ್ಯಕ್ರಮ ರೈತ ಹೋರಾಟದಲ್ಲಿ ಹೊಸ ಭರವಸೆ - ಆಶಯ -ಹೆಜ್ಜೆ ಗುರುತನ್ನು ಮೂಡಿಸುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ .
ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಚಳವಳಿ ಈಗಾಗಲೇ ೧೦೦ ದಿನಗಳನ್ನು ಪೂರೈಸಿದ್ದು 'ದಕ್ಷಿಣ ಭಾರತದಲ್ಲಿಯೂ ಹೋರಾಟವನ್ನು ತೀವ್ರಗೊಳಿಸುವ ಕಹಳೆ ರೈತ ಪಂಚಾಯತ್ ನಲ್ಲಿ ಮೊಳಗಲಿದೆ .
ಮಂಗಳವಾರ, ಮಾರ್ಚ್ 16, 2021
ಕೆಂಪೇಗೌಡರ ಬದಲು ಅದಾನಿಗೆ ಕೆಂಪುಹಾಸು !! !!
ಕೆಂಪೇಗೌಡರ ಅಭಿಮಾನಿಗಳು ಈಗ ಮಾತನಾಡಬೇಕಿದೆ. ಅಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ದೇವನಹಳ್ಳಿಯಲ್ಲೇ ಹುಟ್ಟಿ ಬೆಳೆದ ಟಿಪ್ಪು ಸುಲ್ತಾನ್ ಹೆಸರು ಸೂಕ್ತ ಎಂದು ಗಿರೀಶ್ ಕಾರ್ನಾಡ್ ಅಭಿಪ್ರಾಯ ವ್ಯಕ್ತಪಡಿಸಿದಾಗ ಗದ್ದಲ ಎಬ್ಬಿಸಿದವರೆಲ್ಲರೂ ಈಗ ಮಾತನಾಡಬೇಕಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಇನ್ನು ಕೆಲವೇ ದಿನಗಳಲ್ಲಿ ಕೆಂಪೇಗೌಡ ಏರ್ ಪೋರ್ಟ್ ಎಂಬ ಬೋರ್ಡಿನ ಪಕ್ಕದಲ್ಲೇ ಅದಾನಿ ಏರ್ ಪೋರ್ಟ್ ಎಂಬ ಬೋರ್ಡ್ ಕಾಣಿಸಿಕೊಳ್ಳಲಿದೆ. ಇದು ಕೆಂಪೇಗೌಡರಿಗೆ ಮಾತ್ರವಲ್ಲದೆ ಇಡೀ ಕನ್ನಡಿಗರಿಗೆ ಮಾಡುವ ಅವಮಾನವಾಗಿದೆ.
ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿನ ತನ್ನ ಉಳಿಕೆ ಪಾಲಿನ ಷೇರನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. 2021-22ರ ಹಣಕಾಸು ವರ್ಷದಲ್ಲಿ ಆಸ್ತಿಗಳ ನಗದೀಕರಣದ ಮೂಲಕ 2.5 ಲಕ್ಷ ಕೋಟಿ ರೂ. ಸಂಗ್ರಹಣೆ ಸಂಬಂಧ ತನ್ನ ಪಾಲನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ. ಹಾಗೇನಾದರೂ ಆದರೆ ಮಂಗಳೂರು ಏರ್ ಪೋರ್ಟ್ ನಂತೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ಏರ್ ಪೋರ್ಟ್ ಕೂಡಾ ಅದಾನಿ (ಅದಾನಿಯೇ ಷೇರು ಖರೀದಿಸಿದರೆ) ಏರ್ ಪೋರ್ಟ್ ಆಗಲಿದೆ.
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ಷೇರು ಹಿಂತೆಗೆತ ಸಂಬಂಧ ವಿಮಾನಯಾನ ಸಚಿವಾಲಯ ಅನುಮೋದನೆ ನೀಡಲಿದ್ದು, ಈ ವಿಷಯವು ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಶೇ.13 ಹಾಗೂ ದೆಹಲಿಯ ವಿಮಾನ ನಿಲ್ದಾಣದಲ್ಲಿ ಶೇ.26ರಷ್ಟು ಷೇರನ್ನು ಹೊಂದಿದೆ. ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಗಳನ್ನು ಈಗಾಗಲೇ ಸಚಿವಾಲಯ ಆರಂಭಿಸಿದ್ದು, ಸಂಪುಟದ ಅಂಗೀಕಾರ, ವಿವಿಧ ಇಲಾಖೆಗಳ ಅನುಮೋದನೆ ಪಡೆಯುವ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ.
ಕೆಂಪೇಗೌಡರು ಕೇವಲ ಯಾವುದೋ ಒಂದು ಜಾತಿಗೆ ಸೀಮಿತರಾದವರಲ್ಲ. ಕೆಂಪೇಗೌಡ ಎಂದರೆ ಕನ್ನಡಿಗರ ಅಸ್ಮಿತೆಯ ಪ್ರಶ್ನೆ. ಬಹುಶಃ ನಾನು ಕೆಂಪೇಗೌಡರ ಅಭಿಮಾನಿ ಅಲ್ಲ ಎನ್ನುವ ಕನ್ನಡಿಗ ಕರ್ನಾಟಕದಲ್ಲಿ ಇರಲಿಕ್ಕಿಲ್ಲ. ಈಗ ಕೆಂಪೇಗೌಡ ಅಭಿಮಾನಿಗಳೆಲ್ಲರೂ ಬೆಂಗಳೂರು ವಿಮಾನ ನಿಲ್ದಾಣ ಖಾಸಗೀಕರಣದ ವಿರುದ್ದ ಹೋರಾಟ ಮಾಡಬೇಕಿದೆ.
ಖಾಸಗೀಕರಣವಾದರೂ ಕೆಂಪೇಗೌಡರ ಹೆಸರು ಹಾಗೇ ಉಳಿಯುತ್ತೆ, ಬೋರ್ಡ್ ಬದಲಾಯಿಸುವುದಿಲ್ಲ ಎಂಬಂತ ಹೇಳಿಕೆಗಳನ್ನು ಸರ್ಕಾರ ನೀಡಬಹುದು. ಕೇಂದ್ರ ಸರ್ಕಾರದ ಷೇರು ಇಲ್ಲವೆಂದ ಮೇಲೆ, ಸಂಪೂರ್ಣ ಮಾರಾಟ ಮಾಡಿದ ಮೇಲೆ ಅದು ಖಾಸಗಿಯಷ್ಟೆ. ಇಂದಲ್ಲ ನಾಳೆ ಕೆಂಪೇಗೌಡರ ಹೆಸರನ್ನು ಅಳಿಸಿ ಹಾಕುವುದಂತೂ ನಿಜ. ಜನರ ವಿರೋಧಕ್ಕೆ ಹೆದರಿ ಈಗ ಕೆಂಪೇಗೌಡ ಏರ್ ಪೋರ್ಟ್ ಎಂಬ ಬೋರ್ಡಿನ ಪಕ್ಕದಲ್ಲೇ ಅದಾನಿ ಏರ್ ಪೋರ್ಟ್ ಎಂಬ ಸಣ್ಣ ಬೋರ್ಡ್ ಹಾಕಬಹುದು. ಕಾಲಕ್ರಮೇಣ ಕೆಂಪೇಗೌಡ ಹೆಸರಿನ ಬೋರ್ಡ್ ಅನ್ನು ಕಿತ್ತು ಹಾಕುವುದಂತೂ ಸ್ಪಷ್ಟ. ಹಾಗಾಗಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗಿಕರಣವನ್ನೇ ಕನ್ನಡಿಗರು ವಿರೋಧಿಸಬೇಕಿದೆ.
- ನವೀನ್ ಸೂರಿಂಜೆ
ಮೀಸಲು ಅರಣ್ಯ ವಿರೋಧಿಸಿ ಮತ್ತೆ ಚುನಾವಣೆ ಬಹಿಷ್ಕಾರ :ಸರಣಿ ಸಭೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿಗೆ ಕಂಟಕಪ್ರಾಯವಾಗಿರುವ ಹುಲಿಯೋಜನೆ, ಮೀಸಲು ಅರಣ್ಯ ,ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕಾರಕ್ಕೆ ಸಿದ್ಧತೆ ನಡೆದಿದೆ .
ಯೋಜನೆ ವ್ಯಾಪ್ತಿಗೆ ಒಳಪಡುವ ಗ್ರಾಮ ಪಂಚಾಯ್ತಿಗಳಿಗೆ ಈ ಹಿಂದೆ ನಡೆದ ಚುನಾವಣೆಯನ್ನು ಜನ ಬಹಿಷ್ಕರಿಸಿದ್ದರು.
ಮತ್ತೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ನಾಮಪತ್ರ ಸಲ್ಲಿಸದಂತೆ ಸರಣಿ ಸಭೆಗಳು ನಡೆಯುತ್ತಿವೆ . ಬಹುತೇಕ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳು ಕಡಿಮೆ ಇವೆ .
ಕಳೆದ 1ವಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಣಿ ಸಭೆಗಳನ್ನು ನಡೆಸಿ ಚುನಾವಣೆಯನ್ನು ಬಹಿಷ್ಕರಿಸುವಂತೆ ಜನ ನಿರ್ಧರಿಸಿದ್ದಾರೆ .
ಒಂದೆರಡು ಕಡೆ ನಾಮಪತ್ರ ಸಲ್ಲಿಕೆ ಆಗಿದ್ದರೂ ಅದನ್ನು ಹಿಂದೆ ತೆಗೆಸುವ ವಿಶ್ವಾಸವನ್ನು ಜನ ಹೊಂದಿದ್ದಾರೆ .
ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು ಯಾವುದೇ ಕ್ಷಣದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಗಳು ಇವೆ .
ಪಶ್ಚಿಮಘಟ್ಟಕ್ಕೆ ವಿಶೇಷ ಸ್ಥಾನಮಾನ -ಎಲ್ ಶಂಕರ್ ಪ್ರತಿಪಾದನೆ
ಚಿಕ್ಕಮಗಳೂರು: ಪಶ್ಚಿಮಘಟ್ಟ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೋರಾಟ ರೂಪಿಸುವ ಅಗತ್ಯವಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಬಿ. ಎಲ್. ಶಂಕರ್ ಪ್ರತಿಪಾದಿಸಿದ್ದಾರೆ .
ಪೂರ್ವೋತ್ತರ ರಾಜ್ಯಗಳಿಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ಪಶ್ಚಿಮಘಟ್ಟ ಪ್ರದೇಶಕ್ಕೆ ನೀಡುವ ಅಗತ್ಯವಿದೆ. ದೀರ್ಘ ಕಾಲದ ಹೋರಾಟಕ್ಕೆ ಪೀಠಿಕೆ ಹಾಕುವ ಅಗತ್ಯವಿದ್ದು ಈ ಕುರಿತು ವಿಧಾನಸಭಾಧ್ಯಕ್ಷರು ವಿಶೇಷ ಸಭೆ ಕರೆಯಲು ಮುಂದಾಗಿದ್ದಾರೆ ಎಂದರು .
ಉತ್ತರ ಭಾರತದ 6 ರಾಜ್ಯಗಳು ವಿಶೇಷ ವಲಯಕ್ಕೆ ಸೇರ್ಪಡೆಗೊಂಡು ವಿಶೇಷ ಸ್ಥಾನಮಾನವನ್ನು ಪಡೆದಿದೆ .ತೆರಿಗೆ ಹಾಗೂ ಜನಪ್ರಾತಿನಿಧ್ಯ ದಲ್ಲೂ ವಿನಾಯಿತಿ ಇದ್ದು ಈ ರೀತಿಯ ವಿನಾಯಿತಿಗಳು ಪಶ್ಚಿಮಘಟ್ಟ ಪ್ರದೇಶಕ್ಕೆ ಸಲ್ಲಬೇಕಾಗಿದೆ ಎಂದು ಹೇಳಿದರು .
ಕಾಯಿದೆ ಅಗತ್ಯ :ಸರ್ಫೆಸಿ ಕಾಯಿದೆಯಿಂದ ಕಾಫಿ ಉದ್ಯಮಕ್ಕೆ ದೊಡ್ಡ ಹೊಡೆತ ಬೀಳುತ್ತಿದ್ದು ಉದ್ಯಮದ ರಕ್ಷಣೆಗೆ ಹೊಸ ಕಾಯ್ದೆ ರೂಪಿಸಲು ಕೇಂದ್ರ ಮೇಲೆ ಒತ್ತಡ ತರಬೇಕಾದ ಅಗತ್ಯತೆ ಇದೆ ಎಂದು ತಿಳಿಸಿದರು .
ಶೃಂಗೇರಿಯಲ್ಲಿ ಸರ್ಕಾರಿ ಜಾಗ ಮಾರಾಟ: 7ಜನರ ವಿರುದ್ಧ ಪ್ರಕರಣ
ಚಿಕ್ಕಮಗಳೂರು :ನದಿಪಾತ್ರದ ಖರಾಬು ಜಮೀನು ಮಾರಾಟ ಹಾಗೂ ನೋಂದಣಿ ಮಾಡಿದ ಆರೋಪದ ಮೇಲೆ ಶೃಂಗೇರಿ ಠಾಣೆಯಲ್ಲಿ 7ಜನರ ವಿರುದ್ಧ ಪ್ರಕರಣ ದಾಖಲಾಗಿದೆ .
ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಮೇಲೆ ವಿ ಎಂ ಬೆಳ್ಳಚ್ಚಾರ್ ಹಾಗೂ ಖರೀದಿ ಮಾಡಿದ ಆರೋಪದಡಿ ಕಲ್ಮಕ್ಕಿ ಪ್ರದೀಪ್ ಮೇಲೆ ಪ್ರಕರಣ ದಾಖಲಾಗಿದೆ .
ನೋಂದಣಿ ಮಾಡಿದ ಆರೋಪದಡಿ ಕೊಪ್ಪ ಉಪ ನೋಂದಣಾಧಿಕಾರಿ ಎಸ್ ಅನಿತಾ , ಕಂಪ್ಯೂಟರ್ ನಿರ್ವಾಹಕರಾದ ಎಚ್ ಎನ್ ಕಿರಣ್ ,ನೇತ್ರಾವತಿ ಸಾಕ್ಷಿದಾರರಾದ ಅಗಸನಹಳ್ಳಿ ಬಿ ವಿ ಭಾಸ್ಕರ್, ಎಸ್ ಕುಮಾರ್ ವಿರುದ್ಧ ದೂರು ದಾಖಲಾಗಿರುವುದನ್ನು ಉಪನೋಂದಣಾಧಿಕಾರಿ ಚಲುವರಾಜ್ ಖಚಿತಪಡಿಸಿದ್ದಾರೆ .
2016 ಡಿಸೆಂಬರ್ 12 ರಂದು ಶೃಂಗೇರಿ ಉಪನೋಂದಣಿ ಕಚೇರಿಯಲ್ಲಿ ನದಿಪಾತ್ರದ ಖರಾಬು ಜಮೀನನ್ನು ನೋಂದಣಿ ಮಾಡಲಾಗಿತ್ತು .
ಸೋಮವಾರ, ಮಾರ್ಚ್ 15, 2021
ಬಿಎಸ್ಸೆನ್ನೆಲ್ ಕಚೇರಿಗೆ ಬೆಂಕಿ: ಸುಟ್ಟು ಕರಕಲಾದ ಕೇಬಲ್ ಗಳು
ಚಿಕ್ಕಮಗಳೂರು :ಒಣಗಿದ ತರಗೆಲೆಗಳಿಗೆ ಹಚ್ಚಿದ ಬೆಂಕಿ ಇಲ್ಲಿನ ದೂರವಾಣಿ ಮುಖ್ಯಕಚೇರಿಗೆ ಪಸರಿಸಿ ಭಾರಿ ಪ್ರಮಾಣದ ಕೇಬಲ್ ಗಳು ಸುಟ್ಟು ಕರಕಲಾಗಿವೆ
ಬೆಲ್ಟ್ ರಸ್ತೆಗೆ ಹೊಂದಿಕೊಂಡಂತಿರುವ ದೂರಸಂಪರ್ಕ ಇಲಾಖೆಯ ಮುಖ್ಯ ಕಚೇರಿ ಬಳಿ ಸಾಕಷ್ಟು ತರಗೆಲೆಗಳು ಬಿದ್ದಿದ್ದವು .ಅದಕ್ಕೆ ಯಾರೊ ಬೆಂಕಿ ಹಚ್ಚಿದ್ದಾರೆ .
ಬ ಗಾಳಿಯ ರಭಸಕ್ಕೆ ವೇಗವಾಗಿ ಉರಿದು ಜ್ವಾಲೆಗಳು ಪಕ್ಕದಲ್ಲೇ ಇದ್ದ ದೂರಸಂಪರ್ಕ ಇಲಾಖೆಗೂ ಪಸರಿಸಿದೆ . ಅಲ್ಲಿ ಶೇಖರಿಸಿಟ್ಟಿದ್ದ ಭಾರಿ ಪ್ರಮಾಣದ ಕೇಬಲ್ ಗಳನ್ನು ಅಗ್ನಿ ಆಹುತಿ ಪಡೆದಿದೆ .
ಕಟ್ಟಡ ಭದ್ರವಾಗಿದ್ದ ಹಿನ್ನೆಲೆಯಲ್ಲಿ ಬೆಂಕಿ ಒಳಗೆ ಆವರಿಸಿಲ್ಲ . ಇದರಿಂದಾಗಿ ಉಪಕರಣಗಳಿಗೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ .
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ . ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಾಗಿದೆ
-
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
BIG NEWS ಸಾಧನೆಗಳನ್ನು ಸಾಧಿಸುವವನು ಸಾಧಕ, ಅಂತಹ ಸಾಧಕರ ಸಾಲಿನಲ್ಲಿ ಮೊದಲ ಬಾರಿಗೆ ಕಾಫೀ ಕಣಿವೆ ಮೂಡಿಗೆರೆಯ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಮಲೆನಾಡ ಉದಯೋನ್ಮು...
-
ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯ...
-
ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ. ದೂರುದಾರ ಡಿ ಎನ್ ಜೀವರಾಜ್ ಗೆ ಚ...
-
ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ...
-
ಚಿಕ್ಕಮಗಳೂರು: ವಿಷ ಸೇವಿಸಿದ ಬಳಿಕ ಕೆರೆಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದ ಜೀವಿತ್ (32...
-
ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾ...
-
BIG NEWS ಚಿಕ್ಕಮಗಳೂರು: ಜಿಲ್ಲೆಯಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ...







