udayanews

ಶನಿವಾರ, ಏಪ್ರಿಲ್ 3, 2021

ಚಾರ್ಮಾಡಿಯ' ದೂದ್ ಸಾಗರ್ '



 ಚಿಕ್ಕಮಗಳೂರು : ಸದಾ ಹಸಿರನ್ನು ಹೊದ್ದು ನಿಂತ ಮಲೆನಾಡನ್ನು ನೋಡುವುದೇ ಒಂದು ಸೊಬಗು ಮಳೆಗಾಲದ ನಂತರ ಅದರ ವೈಭವವೇ ಬೇರೆ . 

ಬೇಸಗೆಯಲ್ಲಿ ಕಾನನದಲ್ಲಿ ಅಡಗಿ ಕುಳಿತು ಮಳೆ ಬಿದ್ದೊಡನೆ ಧುತ್ತೆಂದು  ಹೊರಜಗತ್ತಿಗೆ ಕಾಣಿಸಿಕೊಳ್ಳುವ ಜಲ ಧಾರೆಗಳ ನೋಟ ಒಂದು ಕಾವ್ಯ .

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಲಧಾರೆಗಳಿವೆ ಕೊರತೆಯಿಲ್ಲ . ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಜಲಧಾರೆಗಳ ಗಣಿ .

ಜುಲೈನಲ್ಲಿ ಧೋ ಎಂದು ಸುರಿಯುವ ಮಳೆ  ಇಲ್ಲಿನ ಜಲಪಾತಗಳಿಗೆ ಜೀವ ತುಂಬುತ್ತದೆ . ಹೆಜ್ಜೆಗೊಂದರಂತೆ ಸಿಗುವ ಜಲಕನ್ಯೆಯರು ಕಣ್ಮನ ತಣಿಸುತ್ತಾರೆ . ಅಕ್ಟೋಬರ್ ವರೆಗೆ ಈ ಸಂಭ್ರಮ ಇರುತ್ತದೆ .ಮತ್ತೆ ಮಳೆಗಾಲಕ್ಕೆ ಕಾಯಬೇಕು .

ಶುಕ್ರವಾರ, ಏಪ್ರಿಲ್ 2, 2021

ಚಿಕ್ಕಮಗಳೂರು:26 ವಿದ್ಯಾರ್ಥಿನಿಯರಲ್ಲಿ ಸೋಂಕು


 ಚಿಕ್ಕಮಗಳೂರು :ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ ಜನರಲ್ಲಿ ಆತಂಕ ಮನೆಮಾಡಿದೆ .

ಇಂದು 47 ಪ್ರಕರಣಗಳು ಬೆಳಕಿಗೆ ಬಂದಿದ್ದು ಅದರಲ್ಲಿ 26 ವಿದ್ಯಾರ್ಥಿನಿಯರಿಗೆ ಸೋಂಕು ಇರುವುದು  ದೃಢಪಟ್ಟಿದ್ದು ಜನ ಗಾಬರಿಗೊಳ್ಳುವಂತೆ ಮಾಡಿದೆ .

ಬಸವನಹಳ್ಳಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಮೊದಲು ಸೋಂಕು ಕಾಣಿಸಿಕೊಂಡಿತ್ತು .ಆಕೆಯಿಂದಲೇ ಉಳಿದವರಿಗೂ ಹಬ್ಬಿರುವ ಶಂಕೆ ವ್ಯಕ್ತವಾಗಿದೆ . 

ಶೃಂಗೇರಿ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರಲ್ಲಿ ಸೋಂಕು ಕಾಣಿಸಿಕೊಂಡಿದೆ 

ಚಿಕ್ಕಮಗಳೂರಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ- ರಕ್ತದಾನ


 ಚಿಕ್ಕಮಗಳೂರು :ರಾಮನಹಳ್ಳಿ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಡೆಯಿತು .

ಜಿಲ್ಲಾಧಿಕಾರಿ ಕೆ ಎನ್ ರಮೇಶ್ ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂವಿತಾ, ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್, ನಿವೃತ್ತ ಪೋಲಿಸ್ ನಿರೀಕ್ಷಕ ಪ್ರಭಾಕರ್ 


 ಇತರರು ಪಾಲ್ಗೊಂಡಿದ್ದರು .

ನಿವೃತ್ತ ಪೊಲೀಸರು ಹಾಗೂ ಕರೊನ ಸಂದರ್ಭದಲ್ಲಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು . ಧ್ವಜ ದಿನಾಚರಣೆ ಅಂಗವಾಗಿ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಆರೋಗ್ಯ ತಪಾಸಣೆ,  ರಕ್ತದಾನ ಶಿಬಿರ ನಡೆಯಿತು .

ಗುರುವಾರ, ಏಪ್ರಿಲ್ 1, 2021

ಕಳಸ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಅವಘಡ


 ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಇಂದು ಸಂಜೆ  ಬೆಂಕಿ ಕಾಣಿಸಿಕೊಂಡಿದೆ .

ಪ್ಯಾನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಈ ಬೆಂಕಿ ಹರಡಿದೆ ಎನ್ನಲಾಗಿದ್ದು .ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು  ಬ್ಯಾಂಕಿನ ಬಾಗಿಲನ್ನು ತೆಗೆಸಿದ್ದಾರೆ .

ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದ್ದು ನಷ್ಟದ ಪ್ರಮಾಣ ತಿಳಿದುಬಂದಿಲ್ಲ .

ಹಣ ದುರುಪಯೋಗ ; ಶೃಂಗೇರಿಯ ಉಪನೋಂದಣಾಕಾರಿ ಚೆಲುವರಾಜು ಸೇರಿ 7 ಜನರಿಗೆ ಜೈಲು ಶಿಕ್ಷೆ


 ಚಿಕ್ಕಮಗಳೂರು : ರಾಜಸ್ವ ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ನಾಲ್ವರು ಉಪ ನೋಂದಣಾಧಿಕಾರಿಗಳು ಸೇರಿದಂತೆ 7ಜನರಿಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ 

ಉಪನೋಂದಣಾಧಿಕಾರಿಗಳಿಗೆ  ತಲಾ 4 ವರ್ಷ, ಮೂವರು ಪತ್ರ ಬರಹಗಾರರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 1.25 ಕೋಟಿ ದಂಡ ವಿಧಿಸಿ  ಮಂಡ್ಯ 1ನೇ ಹೆಚ್ಚುವರಿ ಸಿವಿಲ್‌, ಜೆಎಂಎಫ್‌ಸಿ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ.

2006ಕ್ಕೂ ಹಿಂದೆ ಮಂಡ್ಯ  ನಗರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಉಪ ನೋಂದಾವಣಾಧಿಕಾರಿಗಳಾಗಿದ್ದ ಎಸ್‌.ಎನ್‌.ಪ್ರಭಾ, ಚಲುವರಾಜು, ಪ್ರಭಾರ ಉಪ ನೋಂದಣಾಧಿಕಾರಿಗಳಾಗಿದ್ದ ಲೀಲಾವತಿ, ಸುನಂದಾ ಹಾಗೂ ಪತ್ರ ಬರಹಗಾರರಾಗಿದ್ದ ಬಿ.ಕೆ.ರಾಮರಾವ್‌, ನರಸಿಂಹಮೂರ್ತಿ, ಚಂದ್ರಶೇಖರ್‌ ಶಿಕ್ಷೆಗೆ ಒಳಗಾದವರು.

ಒಟ್ಟು 154 ಪ್ರಕರಣಗಳಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ 2006ರಲ್ಲಿ ಉಪ ನೋಂದಣಾಧಿಕಾರಿಯಾಗಿದ್ದ ನರಸಿಂಹಯ್ಯ ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. 

ಇದರ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಮೇಶ್‌ ಎಸ್ ಗಾಣಿಗೇರ್‌ ಮಹತ್ವದ ತೀರ್ಪು ನೀಡಿದ್ದಾರೆ.

ಎಸ್‌.ಎನ್‌.ಪ್ರಭಾ ಸದ್ಯ ಬೆಂಗಳೂರು ಐಜಿಆರ್‌ (ಇನ್‌ಸ್ಪೆಕ್ಟರ್‌ ಜನರಲ್‌ ಆಫ್‌ ರಿಜಿಸ್ಟ್ರೇಷನ್‌) ಕಛೇರಿಯಲ್ಲಿದ್ದಾರೆ. ಚೆಲುವರಾಜು ಶೃಂಗೇರಿ ಉಪ ನೋಂದಣಾಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ .


 ಲೀಲಾವತಿ ಮದ್ದೂರು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್‌ಡಿಎ, ಸುನಂದಾ ಬೆಂಗಳೂರು ಎಲೆಕ್ಟ್ರಾನಿಕ್‌ ಸಿಟಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಅಭಿಯೋಜಕ ಎಂ. ಜಿ ಸುರೇಶ್‌ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಶೃಂಗೇರಿ ಉಪನೋಂದಣಾಧಿಕಾರಿ ಚಲುವರಾಜ್ ಇತ್ತೀಚೆಗೆ  ಕಂದಾಯ ಸಚಿವ ಆರ್ ಅಶೋಕ್ ರವರ ಆಪ್ತ ಸಹಾಯಕರ ಮೇಲೆ ಲಂಚದ ಆರೋಪ ಹೊರಿಸಿ ದೂರು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು .


ಯುವಕ ನೀರುಪಾಲು ದೃಶ್ಯ ಮೊಬೈಲ್ ನಲ್ಲಿ ಸೆರೆ

 


ಚಿಕ್ಕಮಗಳೂರು :ಜಿಲ್ಲೆಯ ಭದ್ರಾ ಹಿನ್ನೀರಿನಲ್ಲಿ ಯುವಕನೋರ್ವ ನೀರುಪಾಲಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ .

ನರಸಿಂಹರಾಜಪುರ ತಾಲ್ಲೂಕಿನ ಮಾರಿದಿಬ್ಬ ಬಳಿಯ ಭದ್ರಾ ಹಿನ್ನೀರಿನಲ್ಲಿ  ಶಿವಮೊಗ್ಗದ ಸಲ್ಮಾನ್ ಈಜಲು ತೆರಳಿದ್ದು  ನೀರುಪಾಲಾಗಿದ್ದಾನೆ .

ತನ್ನನ್ನು ರಕ್ಷಿಸುವಂತೆ ಮನವಿ ಮಾಡುತ್ತಿದ್ದರೂ ಯಾರೂ ಸ್ಪಂದಿಸಿಲ್ಲ .ಆದರೆ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ ಇರುವುದು ಅಚ್ಚರಿ ತಂದಿದೆ .


ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ :224 ಕೋಟಿ ರೂ ಉಳಿಕೆ


 ಚಿಕ್ಕಮಗಳೂರು :   ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಪ್ರಸಕ್ತ ಸಾಲಿನಲ್ಲಿ 368. 29 ಕೋಟಿ ರೂ ಆದಾಯ ನಿರೀಕ್ಷಿಸಿದ್ದು   143.63ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಿದ್ದು, 224 ಕೋಟಿ ರೂ ಉಳಿತಾಯ ಆಗಲಿದೆ .

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಪ್ರಾಧಿಕಾರದ ಅಧ್ಯಕ್ಷ ಆನಂದ ಹಾಗೂ ಪ್ರಭಾರಿ ಆಯುಕ್ತ ಬಸವರಾಜ್  ಬೈಪಾಸ್ ರಸ್ತೆಯಿಂದ ದಂಟರಮಕ್ಕಿ ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ಅತ್ಯಾಧುನಿಕ ವಸತಿ ಬಡಾವಣೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು .

ಉದ್ಯಾನವನ, ಕೆರೆಗಳ ಅಭಿವೃದ್ಧಿ ಜೊತೆಗೆ ಯಗಚಿ ಹಳ್ಳದ ಇಕ್ಕೆಲಗಳ ಬಫರ್ ಜಾಗವನ್ನು ಗುರುತಿಸಿ ಒತ್ತುವರಿ ತಡೆಯಲಾಗುತ್ತದೆ ಎಂದು ತಿಳಿಸಿದರು.