udayanews

ಶನಿವಾರ, ಏಪ್ರಿಲ್ 24, 2021

ಚಿಕ್ಕಮಗಳೂರು: ಕರೊನ 2 ಗೆ ಮತ್ತೊಂದು ಸಾವು ; ಸತ್ತವರ ಸಂಖ್ಯೆ 7 ಕ್ಕೆ ಏರಿಕೆ


ಚಿಕ್ಕಮಗಳೂರು :  ಕೊರೋನಾ 2ನೇ ಅಲೆಗೆ ಮತ್ತೊಂದು ಬಲಿ.

ಉಸಿರಾಟದ ಸಮಸ್ಯೆಯಿಂದ ಮೂಡಿಗೆರೆ ಮೂಲದ ಮಹಿಳೆ ಸಾವು.

ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ 

ಇಂದಿರಮ್ಮ(55) ಮೃತ ಪಟ್ಟಿದ್ದಾರೆ.ಪಿ.ಪಿ.ಇ. ಕಿಟ್ ಬಳಸಿ ಮೂಡಿಗೆರೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ. ಕೊರೋನಾ 2ನೇ ಅಲೆಗೆ ಜಿಲ್ಲೆಯಲ್ಲಿ 7 ಮಂದಿ ಸಾವು.

ಸೋಮವಾರ, ಏಪ್ರಿಲ್ 19, 2021

ಕೊಪ್ಪ ಪೋಲಿಸರ ಮಿಂಚಿನ ದಾಳಿ: ಭಾರಿ ಪ್ರಮಾಣದ ಗಾಂಜಾ ವಶ - ಓರ್ವನ ಬಂಧನ


 ಚಿಕ್ಕಮಗಳೂರು ; ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಮಿಂಚಿನ ದಾಳಿ ನಡೆಸಿದ ಅಬಕಾರಿ ಇಲಾಖೆಯವರು   ಓರ್ವನನ್ನು ಬಂಧಿಸಿ ಭಾರೀ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ .

ಜೈಪುರ ಆಟೋ ನಿಲ್ದಾಣದ ಬಳಿ  ಹಶಿಶ್  ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಆಧರಿಸಿ ಅಬಕಾರಿ  ಡಿವೈಎಫ್ ಐ ಪ್ರದೀಪ್ ನೇತೃತ್ವದಲ್ಲಿ ದಾಳಿ ನಡೆಯಿತು .

ವಿಜಯ್ ಎಂಬಾತ ಸೆರೆಸಿಕ್ಕಿತ್ತು ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.  ಸುಮಾರು ೮,೭೫೦ ಗ್ರಾಂ ಗಾಂಜಾ ಹಾಗೂ ೨೦೦ ಗ್ರಾಂ ಹಶಿಶ್ ಪತ್ತೆಯಾಗಿದೆ .

ಔಷಧಿ ದರ ಹೆಚ್ಚಿಸಿದಲ್ಲಿ ಕ್ರಮ : ಶಾಸಕ ಸಿ.ಟಿ.ರವಿ




ಚಿಕ್ಕಮಗಳೂರು.:- ಕೋರೊನಾ ಎರಡನೇ ಅಲೆಯು ವ್ಯಾಪಾಕವಾಗಿ ಹರಡುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಔಷಧಿ ದರವನ್ನು ಹೆಚ್ಚಿಸುವಂತಿಲ್ಲ, ಹೆಚ್ಚಿಸಿದ್ದಲ್ಲಿ  ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಶಾಸಕ ಸಿ.ಟಿ.ರವಿ ಸೂಚಿಸಿದರು. 


ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಖಾಸಗಿ ಆಸ್ಪತ್ರೆಗಳು ಶೇ. ೫೦% ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು,  ಇತರೆ ಖಾಯಿಲೆಗಳಿಗೆ ಸಂಬಂಧಿಸಿದ ರೋಗಿಗಳನ್ನು ನಿರ್ಲಕ್ಷಿಸದೇ ಪರ್ಯಾಯ ಮಾರ್ಗಗಳನ್ನು ರೂಪಿಸಬೇಕು . ಔಷಧಿ ದರಗಳನ್ನು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.


ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಹೆಚ್ಚಿನ ಜನರು ಭೇಟಿ ನೀಡುವುದರಿಂದ, ಅರ್ಚಕರಿಗೆ, ಮುಲ್ಲಾ, ಫಾದರ್‌ಗಳಿಗೆ , ಆಟೋ ಚಾಲಕರು, ಕ್ಷೌರಿಕರುಗಳಿಗೂ ಲಸಿಕೆ ನೀಡುವಂತೆ ತಿಳಿಸಿದರು.

  ನಿಯಮ ಪಾಲಿಸದ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕ್ರಮ ಜರುಗಿಸುವಂತೆ ಹೇಳಿದರು.

ಜಿಲ್ಲಾಧಿಕಾರಿ ಕೆ.ಎನ್.ರಮೇಶ್  , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ತಹಸೀಲ್ದಾರ್ ಕಾಂತರಾಜ್, ಜಿಲ್ಲಾ ಆರೋಗ್ಯ ಮತ್ತು ಕುಂಟಬ ಕಲ್ಯಾಣಾಧಿಕಾರಿ ಡಾ.ಉಮೇಶ್  ಉಪಸ್ಥಿತರಿದ್ದರು.

ಸೋಮವಾರ, ಏಪ್ರಿಲ್ 12, 2021

ಚಿಕ್ಕಮಗಳೂರು: ತೀವ್ರಗೊಂಡ ಸಾರಿಗೆ ನೌಕರರ ಮುಷ್ಕರ


ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರ ಆರನೇ ದಿನಕ್ಕೆ ಕಾಲಿಟ್ಟಿದೆ 

.ಸರ್ಕಾರ ಅನುಸರಿಸುತ್ತಿರುವ ಯಾವುದೇ ರೀತಿಯ ದಮನಕಾರಿ  ತಂತ್ರಗಳಿಗೆ ಮಣಿಯದೆ  ನೌಕರರು ತಮ್ಮ ಪಟ್ಟನ್ನು ಸಡಿಲಿಸದೆ ಮುಷ್ಕರ ಮುಂದುವರಿಸಿದ್ದಾರೆ .ಇಂದು ಆಜಾದ್ ಮೈದಾನದಲ್ಲಿ ತಟ್ಟೆ ಲೋಟ ಬಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನೌಕರರು  ಬೇಡಿಕೆ ಈಡೇರುವ ತನಕ ಮುಷ್ಕರ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ .

ಮುಷ್ಕರಕ್ಕೆ ಬಿಜೆಪಿ ಹೊರತುಪಡಿಸಿ ವಿವಿಧ ಪಕ್ಷ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ .ಸರ್ಕಾರ ನೌಕರರ ಮೇಲೆ ಹೇರುತ್ತಿರುವ ಒತ್ತಡವನ್ನು ಮುಖಂಡರು ಖಂಡಿಸಿದ್ದಾರೆ 


ಮಂಗಳವಾರ, ಏಪ್ರಿಲ್ 6, 2021

ಚಿಕ್ಕಮಗಳೂರು :ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಆರಂಭ


 ಚಿಕ್ಕಮಗಳೂರು :ನಗರದ ಎಲ್ಲೆಂದರಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದರು .

ಬೀದಿ ನಾಯಿಗಳ ಹಾವಳಿಯಿಂದ ಬೇಸತ್ತ ಜನ ನಗರಸಭೆಗೆ ದೂರನ್ನು ಸಲ್ಲಿಸಿದ್ದರು. ಸಾರ್ವಜನಿಕರ ದೂರು ಆಧರಿಸಿ ನಗರಸಭೆ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ಮಾಡಿಸಲು ಆರಂಭಿಸಿದೆ .

ಇಂದಾವರದ ಹೊರವಲಯದಲ್ಲಿ ಈ ಕೆಲಸ ನಡೆಯುತ್ತಿದ್ದು ಸಂತಾನಹರಣ ಚಿಕಿತ್ಸೆಗೆ ಒಳಗಾದ ನಾಯಿಗಳನ್ನು 4ದಿನಗಳ ಬಳಿಕ ಬಿಡಲಾಗುವುದು ಎಂದು ನಗರಸಭೆ ಆಯುಕ್ತ ಬಸವರಾಜ್  ತಿಳಿಸಿದ್ದಾರೆ 

ಸೋಮವಾರ, ಏಪ್ರಿಲ್ 5, 2021

ದಾಸರಹಳ್ಳಿ ಕೆರೆ ಕಾಲುವೆ ಒತ್ತುವರಿ ತೆರವು

 ಚಿಕ್ಕಮಗಳೂರು : ಸಮೀಪದ ದಾಸರಹಳ್ಳಿ ಕೆರೆ ಕಾಲುವೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಉಪವಿಭಾಗಧಿಕಾರಿ ಡಾ.ಹೆಚ್.ಎಲ್ ನಾಗರಾಜ್  ಮಾರ್ಗದರ್ಶನದಲ್ಲಿ ದಾಸರಹಳ್ಳಿ ಕೆರೆ ಸರ್ವೆ ಕಾರ್ಯ ಮುಗಿದಿದ್ದು ಇಂದು 


ಕಾಲುವೆ ಒತ್ತುವರಿ ತೆರವು ಮಾಡಿಸಲಾಯಿತು.

ರೆವಿನ್ಯೂ ಇನ್ಸ್‌ಪೆಕ್ಟರ್ ಪುಟ್ಟರಾಜು,ಸರ್ವೆಯರ್ ದೊರೆರಾಜು. ವಿಷನ್ ಚಿಕ್ಕಮಗಳೂರು ಟ್ರಸ್ಟ್ ಸದಸ್ಯರು ಹಾಗೂ ಸ್ಥಳೀಯರಯ ಭಾಗವಹಿಸಿದ್ದರು.

ಭಾನುವಾರ, ಏಪ್ರಿಲ್ 4, 2021

ವಾಹನಕ್ಕೆ ಸಿಲುಕಿ ಚಿರತೆ ಮರಿ ಸಾವು

 ಚಿಕ್ಕಮಗಳೂರು :ಕಡೂರು ವಲಯದ ಹಾದಿ


ಗೆರೆ ಗ್ರಾಮದ ಬಳಿ ಅಂದಾಜು 1 ಒಂದು ವರ್ಷದ ಚಿರತೆ ಮರಿ ಸಾವನ್ನಪ್ಪಿದೆ. ಯಾವುದೋ ಅಪರಿಚಿತ ವಾಹನಕ್ಕೆ ಸಿಲುಕಿ ಸತ್ತಿರುವ ಸಾಧ್ಯತೆ ಇದೆ.

ಭದ್ರ ವನ್ಯಜೀವಿ ವಿಭಾಗದ ಪಶವೈದ್ಯಾಧಿಕಾರಿ ಯಶಸ್ ಮತ್ತು ಅಸಂದಿ ಗ್ರಾಮ ಪಶವೈದ್ಯಾಧಿಕಾರಿ ಭರತ್ ನೇತೃತವದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.

 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲ , ಕಡೂರು ವಲಯ ಅರಣ್ಯಾಧಿಕಾರಿ ತನುಜ್ ಕುಮಾರ್ , ಗೌರವ ವನ್ಯಜೀವಿ ಪರಿಪಾಲಕ ಜಿ. ವೀರೇಶ್ ಸಿಬ್ಬಂದಿಗಳು ಇದ್ದರು .ಈ ಸಂಬಂಧ ಪ್ರಕರಣ ದಾಖಲಾಗಿದೆ.