udayanews

ಶನಿವಾರ, ಅಕ್ಟೋಬರ್ 22, 2022

ರಾಜ್ಯದಲ್ಲಿ 'ಫಸಲ್‌ ಬಿಮಾ ಯೋಜನೆ' ಫೇಲ್‌ : ಪಾವತಿಸಿದ ಹಣದಷ್ಟೂ ಬಂದಿಲ್ಲ !! ;

 


 ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಕೃಷಿಕರ ಕೈಹಿಡಿಯಬೇಕಾದ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ಕರ್ನಾಟಕದಲ್ಲಿ ಸಂಪೂರ್ಣ ಫೇಲ್‌ ಆಗಿದೆ. ಈಗ ಆಡಳಿತಾರೂಢ ಚುನಾಯಿತ ಪ್ರತಿನಿಧಿಗಳೂ ಬೆಳೆ ವಿಮೆ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಕಷ್ಟಕಾಲದಲ್ಲಿ ರೈತರ ನೆರವಿಗೆ ಬರಬೇಕಿದ್ದ ಬೆಳೆ ವಿಮೆ ಯೋಜನೆಯು ರಾಜ್ಯದಲ್ಲಿ ಅನ್ನದಾತರ ವಿಶ್ವಾಸವನ್ನು ಕಳೆದುಕೊಂಡು ವರ್ಷಗಳೇ ಸಂದಿವೆ. ಈಗ ಆಡಳಿತಾರೂಢ ಚುನಾಯಿತ ಪ್ರತಿನಿಧಿಗಳೂ  ವಿಮೆ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಕೃಷಿಕರ ಕೈಹಿಡಿಯಬೇಕಾದ 'ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ' ಸಂಪೂರ್ಣ ಫೇಲ್‌ ಆಗಿದೆ.ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಅತಿವೃಷ್ಟಿ, ನೆರೆ ಹಾವಳಿಯಿಂದ ವ್ಯಾಪಕ ಬೆಳೆ ನಷ್ಟವಾಗಿದ್ದು, 2019-20ನೇ ಸಾಲಿನಿಂದ ಈವರೆಗೆ ಒಟ್ಟು 53.94 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾಳಾಗಿದೆ. ಇಂತಹ ಸಂಕಷ್ಟ ಕಾಲದಲ್ಲಿ ಬೆಳೆ ವಿಮೆ ಆಸರೆಯಾಗಬೇಕಿತ್ತು. ಆದರೆ, ರೈತರು ತಮ್ಮ ಬೆವರು ಸುರಿಸಿ ಕಟ್ಟಿದ ಪ್ರೀಮಿಯಂ ಕೂಡ ಕೈಗೆ ಸಿಗುತ್ತಿಲ್ಲ..!ಬೆಳೆ ಹಾಳಾದ ಸಂದರ್ಭದಲ್ಲಿ ನಿಗದಿತ ಪರಿಹಾರದ (ಸಮ್‌ ಅಶ್ಯೂರ್ಡ್‌) ಬದಲಿಗೆ ಕಟ್ಟಿದ ಪ್ರೀಮಿಯಂ ಕೂಡ ರೈತರಿಗೆ ಸಿಗುತ್ತಿಲ್ಲ. ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟಕ್ಕೆ ಪರಿಹಾರ ಪಾವತಿಸಬೇಕಿದೆ. ಆದರೆ, ಆಣೆವಾರು ಮಾಡುವಲ್ಲಿ ಕೃಷಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ವಿಮೆ ಕಂಪೆನಿಗಳ ಪರವಾಗಿ ಕೆಲಸ ಮಾಡುತ್ತಿರುವುದು, ವಿಮಾ ಷರತ್ತುಗಳಲ್ಲಿ ಲೋಪವಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ ರೈತರು ಸಂತ್ರಸ್ತರಾಗಿದ್ದಾರೆ. ರೈತರು ತಮ್ಮ ಈ ಎಲ್ಲ ಕಷ್ಟವನ್ನು ಹೇಳಿಕೊಳ್ಳಲು ವಿಮೆ ಕಂಪೆನಿಗಳ ಟೋಲ್‌ ಫ್ರೀ ಸಂಖ್ಯೆಗಳೇ ಕೆಲಸ ಮಾಡುತ್ತಿಲ್ಲ.*ಸಾಲದಲ್ಲೇ ಕಂತು ಕಡಿತ:*ಬ್ಯಾಂಕ್‌, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಮಂಜೂರಾತಿ ವೇಳೆ ವಿಮೆ ಕಂತನ್ನು ಕಡಿತ ಮಾಡಿಕೊಂಡೇ ರೈತರಿಗೆ ಸಾಲದ ಮೊತ್ತ ನೀಡಲಾಗುತ್ತದೆ. ಕಡ್ಡಾಯ ವ್ಯವಸ್ಥೆಯಂತಾಗಿರುವ ಈ ವಿಮೆ ಕಂತು ಬಹುತೇಕ ವಿಮಾ ಕಂಪೆನಿಗಳ ಪಾಲು ಎಂಬಂತಾಗಿದೆ. ಬೆಳೆ ಸಾಲ ಪಡೆಯುವ ರೈತರ ಹೊರತಾಗಿ, ಉಳಿದ ಬಹುತೇಕ ರೈತರು ವಿಮೆ ಯೋಜನೆ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ.ಪರಿಣಾಮ ರಾಜ್ಯದಲ್ಲಿ 2019ರಿಂದ ಈವರೆಗೆ ಒಟ್ಟಾರೆ 38,31,749 ರೈತರಿಗೆ ಸೇರಿದ ಒಟ್ಟು 53,94,575 ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. ಈ ಎಲ್ಲ ರೈತರೂ ಬೆಳೆ ವಿಮೆಯನ್ನೇ ಮಾಡಿಸಿರಲಿಲ್ಲ. ಬೆಳೆ ವಿಮೆ ಕೈಹಿಡಿಯುತ್ತದೆ ಎಂಬ ಭರವಸೆಯನ್ನೇ ಈ ರೈತರು ಕಳೆದುಕೊಂಡಿದ್ದಾರೆ..                      ಶಬರೀಶ್  ಸದಸ್ಯರು  ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಶೃಂಗೇರಿ

ಕಾರ್ಮಿಕರ ಮೇಲೆ ಹಲ್ಲೆ ಖಂಡಿಸಿ ಅ.27 ರಂದು ಜಿಲ್ಲಾ ಕೇಂದ್ರದಲ್ಲಿ ಅಹೋರಾತ್ರಿ ಪ್ರತಿಭಟನೆ


ಚಿಕ್ಕಮಗಳೂರು :ಇತ್ತೀಚೆಗೆ ಬಾಳೆಹೊನ್ನೂರಿನ ಸಮೀಪ ಕಾರ್ಮಿಕರ ಮೇಲೆ ಬಿಜೆಪಿ ಮುಖಂಡ ನಡೆಸಿದ ದೌರ್ಜನ್ಯ ಖಂಡಿಸಿ ಹಾಗೂ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಅ.27 ರಂದು ಚಿಕ್ಕಮಗಳೂರಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ದಲಿತ ಸಂಘರ್ಷ ಸಮಿತಿ ನಿರ್ಧರಿಸಿದೆ ಎಂದು ಮುಖಂಡ ಶ್ರೀನಿವಾಸ್ ಹೇಳಿದ್ದಾರೆ .

ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಮೀನಮೇಷ ನಡೆಸಿದೆಯಲ್ಲದೆ ,ಬಾಳೆಹೊನ್ನೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಚಳವಳಿ ಹತ್ತಿಕ್ಕಲು 144 ನೇ.ಸೆಕ್ಷನ್ ಜಾರಿ ಗೊಳಿಸಿ ದ್ದಾರೆ ಎಂದು ಆರೋಪಿಸಿದ್ದಾರೆ .ಕೂಲಿ ಕಾರ್ಮಿಕರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ದ್ದಾರೆ .
ದತ್ತಮಾಲೆ ಅಭಿಯಾನ : ನವೆಂಬರ್ 7 ರಿಂದ 13 ರವರೆಗೆ ದತ್ತಮಾಲೆ ಅಭಿಯಾನ ನಡೆಸಲು ಶ್ರೀರಾಮ ಸೇನೆ ನಿರ್ಧರಿಸಿದ್ದು , ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಿತು .
ದತ್ತಮಾಲಾ ಧಾರಣೆ , ಮೆರವಣಿಗೆ ,ದತ್ತ ಪಾದುಕೆ  ದರ್ಶನ  ಕಾರ್ಯಕ್ರಮಗಳನ್ನು   ಶ್ರೀರಾಮಸೇನೆ  ಆಯೋಜಿಸಿದೆ .

ದೀಪೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
ಚಿಕ್ಕಮಗಳೂರು,: ಬಿಂಡಿಗ ಮಲ್ಲೇನಹಳ್ಳಿ ಆದಿಶಕ್ತ್ಯಾತ್ಮಕ ಶ್ರೀ ದೇವಿರಮ್ಮ ಜಾತ್ರೆಯ ಪ್ರಯುಕ್ತ ಅ. ೨೩ ರಿಂದ ೨೭ ರ ವರೆಗೆ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ
ಚಿಕ್ಕಮಗಳೂರು ಬಸ್ ನಿಲ್ದಾಣ, ಸಿಂಡಿಕೆಟ್ ಬ್ಯಾಂಕ್, (ಶೃಂಗಾರ್ ಸರ್ಕಲ್) ಸರ್ಕಾರಿ ಡಿಪ್ಲೋಮ ಕಾಲೇಜ್ (ಟೌನ್ ಕ್ಯಾಂಟೀನ್) ಕೈಮರ, ಕಡೂರು ವಾಹನ ನಿಲ್ದಾಣ, ಬೀರೂರು ವಾಹನ ನಿಲ್ದಾಣ, ಹಾಗೂ ತರೀಕೆರೆ ವಾಹನ ನಿಲ್ದಾಣ(ಲಿಂಗದಹಳ್ಳಿ-ಶಾಂತವೇರಿ ಮಾರ್ಗ) ದಿಂದ ಮಲ್ಲೇನಹಳ್ಳಿಗೆ ವಿಶೇಷ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ

ಶುಕ್ರವಾರ, ಅಕ್ಟೋಬರ್ 21, 2022

೪ ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಉತ್ಸವ

  ಚಿಕ್ಕಮಗಳೂರು :  ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ  ಚಿಕ್ಕಮಗಳೂರು ಜಿಲ್ಲಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.   


ಜಾನಪದ ಜಾತ್ರೆ, ಸಿನಿಮೋತ್ಸವ, ನೃತ್ಯೋತ್ಸವ, ಪುಸ್ತಕ ಮೇಳ, ವಸ್ತುಪ್ರದರ್ಶನ, ಕೃಷಿಮೇಳ, ಆಹಾರ ಮೇಳ ಇನ್ನಿತರೆ  ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು  ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುತ್ತದೆ  ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಮಾಹಿತಿ ನೀಡಿದರು .  ಶಾಸಕ ಸಿ.ಟಿ.ರವಿ ಮಾತನಾಡಿ, ಕಳೆದ ಬಾರಿಯ ಕಾರ್ಯಕ್ರಮದ ಲೋಗೋ, ಶೀರ್ಷಿಕೆ, ಅಡಿಬರಹವನ್ನು ಈ ಬಾರಿಯೂ ಮುಂದುವರಿಸಲಾಗುತ್ತದೆ  ಪ್ರಯುಕ್ತ ಪ್ರೋ ಕಬಡ್ಡಿ ಮಾದರಿಯಲ್ಲಿ ಕಬಡ್ಡಿ ಸ್ಪರ್ಧೆ ಆಯೋಜಿಸುವ ಕುರಿತು ಪ್ರೋ ಕಬಡ್ಡಿ ಆಯೋಜಕರಲ್ಲಿ ಚರ್ಚಿಸಲಾಗಿದೆ. ಜಾನಪದ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ ಎಂದು  ತಿಳಿಸಿದರು.

ವೈಯುಕ್ತಿಕ ಜೀವನ ಬದಿಗೊತ್ತಿ ಕರ್ತವ್ಯ ನಿರ್ವಹಿಸುವ ಪೊಲೀಸರನ್ನು ಗುರುತಿಸಬೇಕು: ಶಾಸಕ ಸಿ.ಟಿ.ರವಿ

 


 ಚಿಕ್ಕಮಗಳೂರು, ಅ.೨೧:   ತಮ್ಮ ವೈಯುಕ್ತಿಕ ಜೀವನ ಬದಿಗೊತ್ತಿ ಕಷ್ಟದ ಸಂದರ್ಭಗಳಲ್ಲಿಯೂ ಒತ್ತಡಗಳನ್ನು ಎದುರಿಸಿ ದಿನದ ೨೪ ಗಂಟೆ ಕಾರ್ಯನಿರ್ವಹಿಸುವ ಕರ್ತವ್ಯ ನಿರ್ವಹಿಸುವ ಪೊಲೀಸರನ್ನು ಗುರುತಿಸಬೇಕು ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಹೇಳಿದರು.   ನಾವೆಲ್ಲರೂ ಸುರಕ್ಷಿತವಾಗಿರಬೇಕಾದರೆ ಪ್ರಾಣವನ್ನು ಪಣಕ್ಕಿಟ್ಟು ದೇಶ ಕಾಯುವ ಸೈನಿಕರು ಹಾಗೂ ನಾಗರೀಕ ಸಮಾಜದ ಒಳಗೆ ರಕ್ಷಣೆ ನೀಡುವ ಪೊಲೀಸರು ಕಾರಣ ಎಂದರು.   

ಪೊಲೀಸ್ ಹುತಾತ್ಮರ ದಿನಾಚರಣೆ  ಉದ್ದೇಶಿಸಿ  ಮಾತನಾಡಿ  ನೈತಿಕ ಮೌಲ್ಯಗಳ ಆಧಾರದಲ್ಲಿ  ನಡೆದುಕೊಳ್ಳುವ ಸಮಾಜ ನಿರ್ಮಾಣ ಆಗುವುದಿಲ್ಲವೋ ಅಲ್ಲಿಯವರೆಗೆ ಕಾನೂನು , ಪೊಲೀಸ್ ವ್ಯವಸ್ಥೆಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣದ ಕಡೆಗೆ ಹೆಜ್ಜೆ ಹಾಕಬೇಕಾಗುತ್ತದೆ. ಸಮಾಜದಲ್ಲಿ ಆಸ್ಪತ್ರೆ, ಪೊಲೀಸ್ ಠಾಣೆ ಮತ್ತು ಅನಾಥಾಲಯಗಳು ಹೆಚ್ಚಾಗುವುದು ಒಳ್ಳೆಯ ಸಂಗತಿಯಲ್ಲ ಎಂದರು . 

ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿದರು,   ಪೊಲೀಸ್ ಹುತಾತ್ಮರನ್ನು ಸಂಸ್ಮರಣೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್    ಜಿಲ್ಲೆಯ ೭ ಕರ್ನಾಟಕದ ೧೧ ಪೊಲೀಸರು ಸೇರಿ  ದೇಶದಲ್ಲಿ ಈ ವರ್ಷ ೨೬೪ ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್  ಉಪಸ್ಥಿತರಿದ್ದರು.

ಗುರುವಾರ, ಅಕ್ಟೋಬರ್ 20, 2022

ಅ 24 ರಿಂದ ಬಿಂಡಿಗ ದೇವೀರಮ್ಮನವರ ದೀಪೋತ್ಸವ; ಭಾರಿ ಪ್ರಮಾಣದ ಭಕ್ತರ ನಿರೀಕ್ಷೆ

 ಚಿಕ್ಕಮಗಳೂರು,:  ತಾಲ್ಲೂಕಿನ ಬಿಂಡಿಗ ಮಲ್ಲೇನಹಳ್ಳಿಯ  ದೇವೀರಮ್ಮ ದೇವಸ್ಥಾನದಲ್ಲಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವವು ಅಕ್ಟೋಬರ್ ೨೪ರಿಂದ ೨೭ರವರೆಗೆ ನಡೆಯಲಿದೆ. 

ಕೊರೋನ ಹಿನ್ನೆಲೆಯಲ್ಲಿ  ಕಳೆದ 2 ವರ್ಷಗಳಿಂದ ಕಳೆಗುಂದಿದ್ದ ದೇವಿರಮ್ಮ ಉತ್ಸವ ಈ ಬಾರಿ ಕಳೆಗಟ್ಟಲಿದೆ .ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟವೇರಲು ಭಾರೀ ಸಂಖ್ಯೆಯಲ್ಲಿ ಜನ ಬರುವ ನಿರೀಕ್ಷೆಯಿದ್ದು ,ಪ್ರತಿಕೂಲ ಹವಾಮಾನ ಉತ್ಸಾಹಕ್ಕೆ ತಣ್ಣೀರು ಎರಚುವ ಸಾಧ್ಯತೆಯೂ ಇದೆ .   

ಅ.೨೪ರಂದು ಬೆಳಿಗ್ಗೆ ಶ್ರೀ ದೇವೀರಮ್ಮನ ಬೆಟ್ಟದಲ್ಲಿ ಅಭಿಷೇಕ ನಂತರ ಪೂಜೆ ಪ್ರಾರಂಭವಾಗಲಿದ್ದು, ರಾತ್ರಿ ೭ ಗಂಟೆಗೆ ದೀಪೋತ್ಸವ. ೨೫ ರಂದು ಬೆಳಿಗ್ಗೆ ಗಂಟೆ ೮.೪೫ಕ್ಕೆ ಶ್ರೀ ದೇವಿಯವರಿಗೆ ಉಡುಗೆ, ಪೂಜೆ, ಸಂಜೆ ಬೆಣ್ಣೆ ಬಟ್ಟೆ ಸುಡುವುದು ನಂತರ ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. 

೨೬ರಂದು ರಾತ್ರಿ ಶ್ರೀ ಮಹಾಗಣಪತಿ ಪೂಜೆ, ಪುಣ್ಯಾಹ, ಅಗ್ನಿಕುಂಡ ಪೂಜೆ, ಕಲಶ ಸ್ಥಾಪನೆ

ಕುಂಕುಮಾರ್ಚನೆ ಇತ್ಯಾದಿ ಪೂಜೆ ನಡೆಯಲಿದೆ. ೨೭ರಂದು ಸೂರ್ಯೋದಯಕ್ಕೆ ಕೆಂಡಾರ್ಚನೆ ನಂತರ ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ ನಡೆಯಲಿವೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.

ಚಿಕ್ಕಮಗಳೂರಿನಲ್ಲಿ ರಾಜ್ಯಮಟ್ಟದ ಯುವಜನೋತ್ಸವ


ಚಿಕ್ಕಮಗಳೂರು:  ರಾಜ್ಯಮಟ್ಟದ ಯುವಜನೋತ್ಸವನ್ನು ಚಿಕ್ಕಮಗಳೂರಿನಲ್ಲಿ  ಡಿ. ೧೬, ೧೭ ಮತ್ತು ೧೮ ಅಥವಾ ಡಿ. ೨೧, ೨೨ ಮತ್ತು ೨೩ರಂದು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.  ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ  ಮಾತನಾಡಿ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪ್ರತಿ ಜಿಲ್ಲೆಯಿಂದ ೫೭ ಜನ ಕಲಾವಿದರಂತೆ ಒಟ್ಟು ೧೭೬೭ ಕಲಾಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದಿದ್ದಾರೆ .   

ಅಧ್ಯಕ್ಷತೆ ವಹಿಸಿದ್ದ  ಶಾಸಕ ಸಿ.ಟಿ.ರವಿ ಮಾತನಾಡಿ, ರಾಜ್ಯಮಟ್ಟದ  ಯುವಜನೋತ್ಸವವನ್ನು ಸಣ್ಣ ಕೊರತೆಯೂ ಆಗದಂತೆ ಅದ್ಧೂರಿಯಾಗಿ ಆಯೋಜಿಸಲಾಗುತ್ತದೆ. ಹವಾಮಾನ, ಮಳೆಯ ವರದಿಗಳನ್ನು ಗಮನಿಸಿಕೊಂಡು ಕಾರ್ಯಕ್ರಮದ ದಿನಾಂಕವನ್ನು ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.  

ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್.ಸಿ, ಉಪವಿಭಾಗಾಧಿಕಾರಿ ರಾಜೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕಿ ಡಾ. ಮಂಜುಳಾ,  ಉಪಸ್ಥಿತರಿದ್ದರು.

ಗಂಧ ಕಳ್ಳತನ ಆರೋಪ: ಬಂಧಿತ ವ್ಯಕ್ತಿ ಶೌಚಾಲಯದಲ್ಲಿ ಸಾವು- ಕೊಲೆ ಶಂಕೆ ;ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

ಚಿಕ್ಕಮಗಳೂರು :
 ಗಂಧ ಕಳ್ಳತನದ ಆರೋಪದ ಮೇಲೆ ಬಂಧಿತ ವ್ಯಕ್ತಿಯೋರ್ವ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದು ಅರಣ್ಯ ಇಲಾಖೆ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ .

ತಾಲ್ಲೂಕಿನ ಹೊಸಪೇಟೆ ಸಮೀಪದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ .ಶಿವಮೊಗ್ಗದಿಂದ ಐವರು ಗಂಧ ಕಳ್ಳತನ ಮಾಡಲು ಈ ಭಾಗಕ್ಕೆ ಬಂದಿದ್ದರು ಎನ್ನಲಾಗಿದೆ .

ಮಾಹಿತಿ ತಿಳಿದ ಅರಣ್ಯ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು ಮೂವರು ಪರಾರಿಯಾಗಿದ್ದಾರೆ .

ಬಂಧಿತರಲ್ಲಿ ರವಿ ಎಂಬಾತನ ಶವ ಆನೆ ಶಿಬಿರದ ಬಳಿಯ ಶೌಚಾಲಯದಲ್ಲಿ ಪತ್ತೆಯಾಗಿದ್ದು ಇದು ಕೊಲೆ ಎಂದು ಸಾರ್ವಜನಿಕರು ಸಂಶಯ ಹೊರಹಾಕಿದ್ದಾರೆ .

ಗಂಧ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿದ್ದು ,ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನುವ ಸಬೂಬು ಅರಣ್ಯ ಇಲಾಖೆಯದ್ದಾಗಿದೆ .

ಇಂದು ಬೆಳಿಗ್ಗೆ ಸ್ಥಳಕ್ಕೆ ಆ್ಯಂಬುಲೆನ್ಸ್  ಕರೆಸಿದ್ದು 'ವ್ಯಕ್ತಿ ಮೃತಪಟ್ಟಿರುವುದು ದೃಢವಾಗುತ್ತಿದ್ದಂತೆ ಶವ ತೆಗೆದುಕೊಂಡು ಹೋಗಲು ನಿರಾಕರಿಸಿ ಆ್ಯಂಬ್ಯುಲೆನ್ಸ್ ಹಿಂದೆ  ಬಂದಿದೆ .

ಹೊತ್ತು ಸರಿದಂತೆ ವಿಷಯ ಬಹಿರಂಗಗೊಂಡು ಸ್ಥಳದಲ್ಲಿ ಜಮಾಯಿಸಿದ ಜನ ಅರಣ್ಯ ಇಲಾಖೆ ವಿರುದ್ಧ ಕೊಲೆ ಆರೋಪವನ್ನು ಹೊರೆಸಿ ತೀವ್ರ ಆಕ್ರೋಶ ಹೊರ ಹಾಕಿದೆ.

ವ್ಯಕ್ತಿ ಸಾವಿಗೆ ಕಾರಣವಾಗಿರುವ ಓರ್ವ ಅರಣ್ಯಾಧಿಕಾರಿ ಮತ್ತು ಇಬ್ಬರು ಸಿಬ್ಬಂದಿಯನ್ನು ತಕ್ಷಣ ವಜಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡಿ ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ .

ಪರಿಸ್ಥಿತಿಯನ್ನು ನಿಭಾಯಿಸಲು ಅರಣ್ಯ ಮತ್ತು ಪೊಲೀಸ್ ಇಲಾಖೆ ಹರಸಾಹಸ ಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮಜಾಯಿಷಿಯನ್ನು ಒಪ್ಪದ ಜನ ಇದೊಂದು ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ .

ಬಂಧಿತ ವ್ಯಕ್ತಿಯನ್ನು ತೀವ್ರವಾಗಿ ಥಳಿಸಿದ್ದು, ಆತನ ಕೈ ಕಾಲುಗಳು ಊದಿದ್ದು ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯವೇ ವ್ಯಕ್ತಿ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ .ತಪ್ಪನ್ನು ಮುಚ್ಚಿಕೊಳ್ಳಲು ಅರಣ್ಯ ಇಲಾಖೆ ಯತ್ನಿಸುತ್ತಿದೆ ಎಂಬ ಟೀಕೆಯೂ ವ್ಯಕ್ತವಾಗಿದೆ 

ಸಂಜೆ ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಜನ ಪಟ್ಟು ಹಿಡಿದಿದ್ದಾರೆ .

 ಗಂಧ ಕಳ್ಳತನ ಆರೋಪ ಹೊರೆಸಿರುವ ಅರಣ್ಯ ಇಲಾಖೆಗೆ ವಶಪಡಿಸಿ ಕೊಂಡಿರುವ ಗಂಧವನ್ನು ತೋರಿಸಲು ಸಾಧ್ಯವಾಗಿಲ್ಲ. ಮೇಲ್ನೋಟಕ್ಕೆ ಇದೊಂದು ಕೊಲೆ ಎನ್ನುವ ಶಂಕೆ ವ್ಯಕ್ತವಾಗಿದ್ದು ಮರಣೋತ್ತರ ಪರೀಕ್ಷೆಯಿಂದ ಸತ್ಯ ಹೊರ ಬರಬೇಕಾಗಿದೆ .