udayanews

ಭಾನುವಾರ, ಅಕ್ಟೋಬರ್ 30, 2022

ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ : ಪೋಕ್ಸೊ ಕಾಯ್ದೆ ಅಡಿ ಶಿಕ್ಷಕನ ಬಂಧನ

 ಚಿ


ಕ್ಕಮಗಳೂರು :ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಕೊಪ್ಪದ ಸರ್ಕಾರಿ ಶಾಲೆ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ .

ಕೊಪ್ಪ ಸರ್ಕಾರಿ ಶಾಲೆ ಶಿಕ್ಷಕ ಸತೀಶ್ ಬಂಧಿತ ಆರೋಪಿ .ಈತನ ವಿರುದ್ಧ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ .

ಈ ಶಿಕ್ಷಕ ಈ ಹಿಂದೆ ಕೆಲಸ ಮಾಡುತ್ತಿದ್ದ ಶಾಲೆ ಮುಚ್ಚಲು ಈತನ ಅನುಚಿತ ವರ್ತನೆ ಕಾರಣ ಎನ್ನುವ ಆರೋಪವೂ ಇದೆ .ಶಿಕ್ಷಕನನ್ನು ಈಗಾಗಲೇ  ಅಮಾನತುಪಡಿಸಲಾಗಿದೆ

 ಅನುದಾನ ಹಂಚಿಕೆ ತಾರತಮ್ಯ ಆರೋಪ : ಪಿಡಿಒ -ಸದಸ್ಯರ ಮಧ್ಯೆ ಜಟಾಪಟಿ ;ರಸ್ತೆ ತಡೆ ಪ್ರತಿಭಟನೆ 


ಚಿಕ್ಕಮಗಳೂರು :ಅನುದಾನ ಹಂಚಿಕೆ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ .

ಕಡೂರು ತಾಲ್ಲೂಕಿನ ನಾಗನಹಳ್ಳಿ ಗ್ರಾಮ ಪಂಚಾಯಿತಿ  ಸದಸ್ಯ ವಸಂತ್ ಕುಮಾರ್ ಮತ್ತು ಪಿಡಿಒ ಪದ್ದಣ್ಣ ಗಾವಾಡಿಯ ನಡುವೆ  ಚರಂಡಿ ಸ್ವಚ್ಛತೆ ವಿಚಾರದಲ್ಲಿ ಆರಂಭವಾದ ಜಗಳ ಅನುದಾನ ಹಂಚಿಕೆ ವಿಷಯಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ .

ಈ ಬಗ್ಗೆ ಸಖರಾಯಪಟ್ಟಣ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು ಪಿಡಿಒ ತಲೆಮರೆಸಿಕೊಂಡಿದ್ದಾರೆ . 

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರು ರಾಜಿ ಪಂಚಾಯಿತಿ ಮಾಡಲು ಯತ್ನಿಸಿದ್ದರೂ ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್ ಉದ್ದೇಶಪೂರ್ವಕವಾಗಿ ಪಿಡಿಓರವರನ್ನು ತಲೆಮರೆಸಿಕೊಳ್ಳಲು ಸಹಕಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ .

ವಿಷಯ ತಿಳಿಯುತ್ತಿದ್ದಂತೆ ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿಶಾಂತೇಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಖರಾಯಪಟ್ಟಣ ಠಾಣೆ ಎದುರು ರಸ್ತೆ ತಡೆ ನಡೆಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು .ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದಿದ್ದು ಎಲ್ಲಿಗೆ ಹೋಗಿ ನಿಲ್ಲುತ್ತದೆೊ ಕಾದು ನೋಡಬೇಕು 


9ನೇ ತರಗತಿ ವಿದ್ಯಾರ್ಥಿನಿ ಅಕಾಲಿಕ ಮೃತ್ಯು- ನೇತ್ರದಾನ

 


ಮೂಡಿಗೆರೆ: ಇಲ್ಲಿನ ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ನಿನ್ನೆ ರಾತ್ರಿ  ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.  ಈಕೆಯ ಪೋಷಕರು ಎಂ.ಜಿ ರಸ್ತೆಯ ರಾಮೇಶ್ವರ ಮೆಡಿಕಲ್  ಅಂಗಡಿ ಬಳಿ ಚಿನ್ನ ಬೆಳ್ಳಿ  ಆಭರಣ  ರಿಪೇರಿ ಮಾಡುತ್ತಿದ್ದು ಮಹಾರಾಷ್ಟ್ರದ ಮೂಲದವರಾಗಿದ್ದಾರೆ .ವಿದ್ಯಾರ್ಥಿನಿ ಅಕಾಲಿಕ ನಿಧನದ ವಿಷಯ ತಿಳಿಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ, ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.  ಆಕೆಯ ಎರಡೂ ಕಣ್ಣುಗಳನ್ನು ಹಾಸನದ ನೇತ್ರ ಬ್ಯಾಂಕಿಗೆ   ದಾನ ಮಾಡಲು  ತಂದೆ ತಾಯಿ ನಿರ್ಧರಿಸಿದ್ದಾರೆ. 

ಶನಿವಾರ, ಅಕ್ಟೋಬರ್ 29, 2022

ಕ್ಯಾನ್ಸರ್ ; ಮುಕ್ತ ಚರ್ಚೆ ಅಗತ್ಯ : ಡಾ.ಮಂಜುನಾಥ್

 ಚಿಕ್ಕಮಗಳೂರು:- ಕ್ಯಾನ್ಸರ್  ಬಗ್ಗೆ ವೈದ್ಯರೊಂದಿಗೆ  ಮುಕ್ತವಾಗಿ ಚರ್ಚಿಸಿ   ಪರಿಹಾರ ಕಂಡುಕೊಳ್ಳುವಂತೆ  ಜಿಲ್ಲಾ ವಿಚಕ್ಷಣಾಧಿಕಾರಿ ಡಾ. ಹೆಚ್.ಕೆ.ಮಂಜುನಾಥ್ ಹೇಳಿದರು.    ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಬೆಂಗಳೂರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ  ಕ್ಯಾನ್ಸರ್ ಮತ್ತು ಆರೋಗ್ಯ ತಪಾಸಣಾ ಶಿಬಿರದಲ್ಲಿ  ಭಾಗವಹಿಸಿ  ಮಾತನಾಡಿದರು.      ಅಧ್ಯಕ್ಷತೆಯನ್ನು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಆರ್.ಶ್ರೀನಿವಾಸ್ ವಹಿಸಿದ್ದರು. ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ .ಮಹಾಂತೇಶ್, ವಿಘ್ನೇಶ್  ತಪಾಸಣೆ ನಡೆಸಿದರು. ಸಂಸ್ಥೆಯ ಉಪಾಧ್ಯಕ್ಷ ಪ್ರದೀಪ್‌ಗೌಡ, ಆರೋಗ್ಯ ಸಮಿತಿ ಅಧ್ಯಕ್ಷ ಡಾ .ಕೆ.ಸುಂದರಗೌಡ,  ನಿರ್ದೇಶಕರಾದ ರಸೂಲ್‌ಖಾನ್, ಕೋಟೆ ಸೋಮಣ್ಣ, ಪವನ್, ಲಿಖಿತ್, ವಿನಾಯಕ್, ಬ್ರಹ್ಮಕುಮಾರಿ  ಭಾಗ್ಯಕ್ಕ   ಹಾಜರಿದ್ದರು.                      

ನಟ ಪುನೀತ್‌ರಾಜ್‌ಕುಮಾರ್ ಗೆ ಪುಷ್ಪನಮನ    ಚಿಕ್ಕಮಗಳೂರು :- ನಟ ಪುನೀತ್‌ರಾಜ್‌ಕುಮಾರ್  ಮೃತರಾಗಿ ಒಂದು ವರ್ಷ ಕಳೆದ ಹಿನ್ನೆಲೆಯಲ್ಲಿ ಜಿಲ್ಲಾ ಡಾ| ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಆಜಾದ್‌ಪಾರ್ಕ್ ವೃತ್ತದಲ್ಲಿ ಪುನೀತ್ ಭಾವಚಿತ್ರಕ್ಕೆ ಶಾಲಾ ಮಕ್ಕಳೊಂದಿಗೆ ಪುಷ್ಪನಮನ ಸಲ್ಲಿಸಲಾಯಿತು.

 ಸಂಘದ ಜಿಲ್ಲಾಧ್ಯಕ್ಷ ಐ.ಕೆ.ಓಂಕಾರೇಗೌಡ  , ಸಂಘದ ಗೌರವಾಧ್ಯಕ್ಷ ಎಲ್.ವಿ.ಕೃಷ್ಣಮೂರ್ತಿ, ಡಿಸಿಸಿ ಬ್ಯಾಂಕ್ ಮಾಜಿ ವ್ಯವಸ್ಥಾಪಕ ಲೋಕೇಗೌಡ, ಆಜಾದ್‌ಪಾರ್ಕ್ ಶಾಲೆ ಶಿಕ್ಷಕ ಲೋಕೇಶ್ವರಾಚಾರ್ ಹಾಗೂ ಶಾಲಾಮಕ್ಕಳು ಉಪಸ್ಥಿತರಿದ್ದರು.        



ಸಮುದಾಯ ಭವನ  -ಗುಣಮಟ್ಟಕ್ಕೆ ಮೆಚ್ಚುಗೆ         
ಚಿಕ್ಕಮಗಳೂರು: ರಾಜ್ಯ ಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಅನುದಾನದಡಿಯಲ್ಲಿ ಹಿರೇಮಗಳೂರು ವ್ಯಾಪ್ತಿಯ ಲಕ್ಷ್ಮಿ ಪುರದ ಗೌರೇಶ್ವರ ಸಮುದಾಯ ಭವನದ ಮೇಲಂತಸ್ತಿನ ಕಾಮಗಾರಿ ಗುಣಮಟ್ಟ ವೀಕ್ಷಿಸಿದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.            ನಗರಸಭೆ ಮಾಜಿ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಮಾಹಿತಿ ನೀಡಿ,  ಶಾಸಕಿಯಾಗಿದ್ದ ಎ.ವಿ.ಗಾಯತ್ರಿ ಶಾಂತೇಗೌಡ ೩ ಲಕ್ಷ ರೂ. ವಿಧಾನ ಪರಿಷತ್ ಶಾಸಕ  ಗೋವಿಂದರಾಜು ೩ ಲಕ್ಷ ರೂ  ಶಾಸಕ ಸಿ.ಟಿ.ರವಿ  ೨ ಲಕ್ಷ ರೂ  ರಾಜ್ಯಸಭಾ ಸದಸ್ಯ ರೇಹಮಾನ್ ಖಾನ್  ೩ ಲಕ್ಷ ರೂ. ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಗಡೆ  ೧ ಲಕ್ಷ ರೂ.ಅನುದಾನ ನೀಡಿದ್ದಾರೆಂದರು .          

  

ಶುಕ್ರವಾರ, ಅಕ್ಟೋಬರ್ 28, 2022

ಜನವರಿ ೧೮ರಿಂದ ೨೨ವರೆಗೆ ಚಿಕ್ಕಮಗಳೂರು ಜಿಲ್ಲಾ ಉತ್ಸವ:

 ಚಿಕ್ಕಮಗಳೂರು : ಜನವರಿ ೧೮ರಿಂದ ೨೨ವರೆಗೆ ೪ ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ  ಉತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತದೆ. ಎಲ್ಲರೂ ಕೈಜೋಡಿಸಿ, ಒಗ್ಗಟ್ಟಾಗಿ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದ್ದಾರೆ.


ಉತ್ಸವದ ಹಿನ್ನೆಲೆಯಲ್ಲಿ ಶಾಸಕ ಸಿ ಟಿ ರವಿ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು .


ಕೆಂಪೇಗೌಡ ಪ್ರತಿಮೆಗೆ ಮೃತ್ತಿಕೆ ಸಂಗ್ರಹ                      

ಚಿಕ್ಕಮಗಳೂರು,  ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪ್ರತೀ ಜಿಲ್ಲೆಯಿಂದ ಮೃತ್ತಿಕೆ ಸಂಗ್ರಹಿಸುವ ಅಭಿಯಾನಕ್ಕೆ ಜಿಲ್ಲೆಯಲ್ಲಿ  ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಚಾಲನೆ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ  ನ.೧೧ರಂದು ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಸರ್ಕಾರವು ಪ್ರತಿ ಜಿಲ್ಲೆಯ ಪ್ರತಿ ಗ್ರಾಮಗಳಿಂದ ಮಣ್ಣು ಸಂಗ್ರಹ ಅಭಿಯಾನವನ್ನು ಕೈಗೊಂಡಿದ್ದು, ಪ್ರತಿ ಜಿಲ್ಲೆಗೆ ತೆರಳಿ ಮಣ್ಣು ಸಂಗ್ರಹ ಮಾಡಲಾಗುತ್ತದೆ ಎಂದು ತಿಳಿಸಿದರು.


ಬೀರಲಿಂಗೇಶ್ವರ ಸಮುದಾಯ ಭವನ ಉದ್ಘಾಟನೆ




ಚಿಕ್ಕಮಗಳೂರು :  ಕಡೂರು ತಾಲ್ಲೂಕು ನಿಡಘಟ್ಟ ಗ್ರಾಮದಲ್ಲಿ ನಿರ್ಮಿಸಲಾದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನವನ್ನು  ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ(ಬೈರತಿ) ಉದ್ಘಾಟನೆಗೊಳಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವ ಯಾವ 
ಕಾಗಿನೆಲೆ ಕನಕ ಗುರು ಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಮಹಾಸ್ವಾಮಿ . ನಿಡಘಟ್ಟ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಎನ್.ಆರ್.ರೇಣುಕಮೂರ್ತಿ ,
 ಶಾಸಕ ಸಿ.ಟಿ.ರವಿ, ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ, ಮಾಜಿ ಸಚಿವ ಎಚ್.ಎಂ.ರೇವಣ್ಣ, ನಿಡಘಟ್ಟ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿ ಎನ್.ಕೆ.ನಂಜುಂಡಪ್ಪ  ಉಪಸ್ಥಿತರಿದ್ದರು.





ಕೋಟಿಕಂಠ ಗಾಯನಕ್ಕೆ ಧ್ವನಿಯಾದ ವಿದ್ಯಾರ್ಥಿಗಳು ;ಉಸ್ತುವಾರಿ ಸಚಿವರು ಭಾಗಿ - ಶಾಸಕ ಸಿ ಟಿ ರವಿ ಸ್ಟೆಪ್ಸ್

 


ಚಿಕ್ಕಮಗಳೂರು: ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಕನ್ನಡ ಗಾಯನಕ್ಕೆ ಜಿಲ್ಲಾ ಕೇಂದ್ರ ಚಿಕ್ಕಮಗಳೂರು ಇಂದು ಸಾಕ್ಷಿಯಾಯಿತು .

ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕನ್ನಡದ 6 ಹಾಡುಗಳನ್ನು ಸಾಮೂಹಿಕವಾಗಿ  ಹಾಡಿ ಮನಸೂರೆಗೊಂಡರು .

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಇತರರು ಪಾಲ್ಗೊಂಡಿದ್ದರು .ಹುಟ್ಟಿದರೆ ಕನ್ನಡ ನಾಡು ಹಾಡಿಗೆ ಶಾಸಕ ಸಿ ಟಿ ರವಿ ಇತರರು ಸ್ಟೆಪ್ಸ್ ಹಾಕಿದರು 

ದಲಿತರ ಮೇಲೆ ದೌರ್ಜನ್ಯ : ಕಾಫಿ ತೋಟದ ಮಾಲಿಕನ ಬಂಧನಕ್ಕೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ

 


ಚಿಕ್ಕಮಗಳೂರು :ತಾಲ್ಲೂಕು ಹುಣಸೆಹಳ್ಳಿ ಪುರದಲ್ಲಿ ತೋಟ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಿ ಮಹಿಳೆಯೊಬ್ಬರ ಗರ್ಭಪಾತಕ್ಕೆ ಕಾರಣವಾಗಿರುವ ತೋಟದ ಮಾಲೀಕ ಮತ್ತು ಆತನ ಪುತ್ರನನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಮುಖಂಡರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.

ಘಟನೆ ನಡೆದು 15 ದಿನಗಳು ಕಳೆದರೂ ಈವರೆಗೂ ತೋಟದ ಮಾಲೀಕ ಜಗದೀಶ ಗೌಡ ಮತ್ತು ತಿಲಕ್ ಗೌಡನನ್ನು ಬಂಧಿಸಿಲ್ಲವೆಂದು ಮುಷ್ಕರ ನಿರತರು ಆರೋಪಿಸಿದ್ದಾರೆ .

ತೋಟ ಕಾರ್ಮಿಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿರುವ ಬಾಳೆಹೊನ್ನೂರು  ಪೊಲೀಸರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳದಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ .

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದ್ದಾರೆ.

ಆರೋಪಿ ಬಿಜೆಪಿ ಮುಖಂಡ ನಾಗಿದ್ದು ಪ್ರಕರಣವನ್ನು ಮುಚ್ಚಿಹಾಕುವ ವ್ಯವಸ್ಥಿತ ಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ .

ದಂಟರಮಕ್ಕಿ ಶ್ರೀನಿವಾಸ್, ಹೊನ್ನೇಶ್, ಗಿರೀಶ, ಅಂಗಡಿ ಚಂದ್ರು ,ಕೂದುವಳ್ಳಿ ಮಂಜುನಾಥ್,ಗೌಸ್ ಮುನೀರ್  ಸೇರಿದಂತೆ ಹಲವರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ .