udayanews

ಮಂಗಳವಾರ, ನವೆಂಬರ್ 22, 2022

ಶಾಸಕರ ಮೇಲೆ ಹಲ್ಲೆ : ದಲಿತ ದೌರ್ಜನ್ಯ ಪ್ರಕರಣ ದಾಖಲಿಸಲು ಆಗ್ರಹ



ಚಿಕ್ಕಮಗಳೂರು: ಆನೆ ತುಳಿತದಿಂದ ಸಾವಿಗೀಡಾದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಯವರನ್ನು ಜಾತಿ ನಿಂದನೆ ಮಾಡಿದವರ ವಿರುದ್ಧ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಹೊನ್ನೇಶ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಅಂದುಶಾಸಕರನ್ನು ಜಾತಿ ಸೂಚಕ ಪದಗಳಿಂದ ನಿಂದಿಸಿದ್ದು ಈವರೆಗೂ ಆ ಬಗ್ಗೆ ಪ್ರಕರಣ ದಾಖಲಿಸದೆ ಪೊಲೀಸರು ನಿರ್ಲಕ್ಷ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಬೀಮ್ ಸೇನಾ ಅರ್ಮಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.
ಮುಗ್ಧರ ವಿರುದ್ಧ ಕ್ರಮ ಸಲ್ಲದು : ಮೂಡಿಗೆರೆ ಶಾಸಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಮುಗ್ಧರ ವಿರುದ್ಧ ಪ್ರಕರಣದ ದಾಖಲಿಸಿ ಬಂಧಿಸಿರುವುದು ಸರಿಯಲ್ಲ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ' ಕಾಂಗ್ರೆಸ್ ಹಾಗೂ ಜೆಡಿಎಸ್   ಅಭಿಪ್ರಾಯಸಿದೆ.
ಘಟನೆ ಹಿಂದೆ ಬಿಜೆಪಿಯವರದ್ದೇ ಕೆಲವರ ಷಡ್ಯಂತರ ಇದ್ದು ತಪ್ಪಿತಸ್ಥರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ರಾಧಾ  ಸುಂದರೇಶ್ ದೇವರಾಜ್ ಮತ್ತು ಮಂಜಪ್ಪ ಗೌಡ ಒತ್ತಾಯಿಸಿದ್ದಾರೆ




ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದ ನೂರಾರು ಕಾರ್ಯಕರ್ತರು : ಶಾಸಕರಿಗೆ ಶಾಕ್


ಚಿಕ್ಕಮಗಳೂರು :ಶೃಂಗೇರಿ ಕ್ಷೇತ್ರದ ಮಹಲ್ ಗೋಡು ಗೋಡು ಗ್ರಾಮದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ಕೊಟ್ಟಿದ್ದಾರೆ

 ಗ್ರಾ.ಪಂ ಮಾಜಿ ಅಧ್ಯಕ್ಷೆ ಕಮಲ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು  ಬಿಜೆಪಿಗೆ ಸೇರಿದ್ದಾರೆ.

ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಘೋಷಣೆ ಹಾಕಿದ್ದು  ಮಾಜಿ ಸಚಿವ ಜೀವರಾಜ್ ಬಹುತೇಕ ಹಿಂದುಳಿದ ಜನಾಂಗಕ್ಕೆ ಸೇರಿದ ಈ ಕಾರ್ಯಕರ್ತರನ್ನು ಬರ ಮಾಡಿಕೊಂಡಿದ್ದಾರೆ.

ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿದ್ದಾರೆ.



ಸೋಮವಾರ, ನವೆಂಬರ್ 21, 2022

ತಮ್ಮ ಮೇಲಿನ ಹಲ್ಲೆ ವ್ಯವಸ್ಥಿತ ಸಂಚು: ರಾಜಕೀಯ ಪಿತೂರಿ-ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ

 


ಚಿಕ್ಕಮಗಳೂರು: ಕಾಡಾನೆಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ ಹಾಗೂ ರಾಜಕೀಯ ಸಂಚು ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ತಾವು ಸ್ಥಳಕ್ಕೆತೆರಳಿದ್ದ ಸಂದರ್ಭದಲ್ಲಿ ಬಹಳಷ್ಟು ಜನ ಕೈಯಲ್ಲಿ ದೊಣ್ಣೆ ಇತರೆ ಆಯುಧಗಳು ಇದ್ದು ಎಂದು ದೂರಿದ್ದಾರೆ.
ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಸಹವಾಲು ಸ್ವೀಕರಿಸಲು ತೆರಳಿದ್ದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಆಕ್ರೋಶಭರಿತರಾಗಿದ್ದ ಜನ ಚಪ್ಪಲಿಯಿಂದ ತಳ್ಳಿಸಿದ್ದೆ ಅಲ್ಲದೆ, ಅಟ್ಟಾಡಿಸಿಕೊಂಡು ಬಂದರು ಎಂದು ಘಟನೆಯ ಮಾಹಿತಿ ಕೊಟ್ಟಿದ್ದಾರೆ.
ತಮ್ಮ ಹಾಗೂ ಪೊಲೀಸರ ವಾಹನಗಳ ಮೇಲು ಕಲ್ಲು ತೂರಿದ್ದು ಇದೊಂದು ರಾಜಕೀಯ ವ್ಯವಸ್ಥಿತ ಪಿತೂರಿ ಎಂದು ಆರೋಪಿಸಿ ಮುಂದಿನ ದಿನಗಳಲ್ಲಿ ತಾವು ಚುನಾವಣೆಗೆ ನಿಲ್ಲಬಾರದು ಎನ್ನುವ ಷಡ್ಯಂತರ ಇದರ  ಹಿಂದೆ ಇದೆ ಎಂದರು.
ವ್ಯಾಪಕ ಖಂಡನೆ: ಮೂಡಿಗೆರೆ ಶಾಸಕ ಎಂಪಿ ಕುಮಾರ ಸ್ವಾಮಿ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ವಿವಿಧ ದಲಿತ ಪರ ಸಂಘಟನೆಗಳು ಖಂಡಿಸಿವೆ. ಇಂಥ ಘಟನೆಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ಕರೆ ನೀಡಿವೆ
ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಯನ್ನು ಹತ್ತಿಕ್ಕುವ ಕೆಲಸವನ್ನು ಕೆಲ ಮೇಲ್ವರ್ಗದವರು ನಿರಂತರವಾಗಿ ಮಾಡುತ್ತಿದ್ದು ಅದರ ಮುಂದುವರಿದ ಭಾಗ ಈ ಘಟನೆ ಎಂದು ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗಿದೆ

ಭಾನುವಾರ, ನವೆಂಬರ್ 20, 2022

ಆನೆ ದಾಳಿಗೆ ಮಹಿಳೆ ಸಾವು: ಸ್ಥಳಕ್ಕೆ ತೆರಳಿದ ಶಾಸಕರ ಮೇಲೆ ಹಲ್ಲೆ ಯತ್ನ : ಶವ ಇಟ್ಟು ಪ್ರತಿಭಟನೆ- ಲಾಠಿ ಪ್ರಹಾರ ಕೊಟ್ಟಿಗೆಹಾರ :ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ ಈಗ ಹೊಸ ತಿರುವು ಪಡೆಯ ತೊಡಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯು ನಡೆದಿದೆ.ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವಪಿದ್ದು ಸಂಜೆ 6 ಗಂಟೆಗೆ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿ ನಡೆಯನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ.ಶಾಸಕ ಕುಮಾರಸ್ವಾಮಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದುಪ್ರಶ್ನೆ ಮಾಡಿದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿದೆ . ಶಾಸಕರ ಮೇಲೆ ಹಲ್ಲೆ ಯತ್ನ ನಡೆದಿದ್ದು ಅವರನ್ನು ಗ್ರಾಮದಿಂದ ಪೊಲೀಸರು ಜೀಪಿನಲ್ಲಿ ಸುರಕ್ಷಿತವಾಗಿ ಕರೆತಂದಿದ್ದಾರೆ. ಹರಿದು ಹೋದ ಅಂಗಿಯೊಂದಿಗೆ ಸ್ಪಷ್ಟನೆಯನ್ನು ನೀಡಿದ ಶಾಸಕರು ಉದ್ದೇಶಪೂರ್ವಕವಾಗಿ ಈ ಹಲ್ಲೆ ಯತ್ನ ತಡೆದಿದೆ ಎಂದು ಆರೋಪಿಸಿದ್ದಾರೆ

 


ಕೊಟ್ಟಿಗೆಹಾರ :ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ ಈಗ ಹೊಸ ತಿರುವು ಪಡೆಯ ತೊಡಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯು ನಡೆದಿದೆ.ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವಪಿದ್ದು ಸಂಜೆ 6 ಗಂಟೆಗೆ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿ ನಡೆಯನ್ನ  ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ.ಶಾಸಕ ಕುಮಾರಸ್ವಾಮಿಯನ್ನು  ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದುಪ್ರಶ್ನೆ ಮಾಡಿದ ಜನರ ಮೇಲೆ  ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ
ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿದೆ .
ಶಾಸಕರ ಮೇಲೆ ಹಲ್ಲೆ ಯತ್ನ ನಡೆದಿದ್ದು ಅವರನ್ನು ಗ್ರಾಮದಿಂದ ಪೊಲೀಸರು ಜೀಪಿನಲ್ಲಿ ಸುರಕ್ಷಿತವಾಗಿ ಕರೆತಂದಿದ್ದಾರೆ.
ಹರಿದು ಹೋದ ಅಂಗಿಯೊಂದಿಗೆ ಸ್ಪಷ್ಟನೆಯನ್ನು ನೀಡಿದ ಶಾಸಕರು ಉದ್ದೇಶಪೂರ್ವಕವಾಗಿ ಈ ಹಲ್ಲೆ ಯತ್ನ ತಡೆದಿದೆ ಎಂದು ಆರೋಪಿಸಿದ್ದಾರೆ.











ಚಿನ್ನದ ವರ್ತಕನನ್ನು ಬೆದರಿಸಿ ದರೋಡೆ ; ಅಜ್ಜಂಪುರ ಠಾಣಾಧಿಕಾರಿ ಸೇರಿ ನಾಲ್ಕರ ವಿರುದ್ಧ ಪ್ರಕರಣ ದಾಖಲು : ಆರೋಪಿಗಳು ಎಸ್ಕೇಪ್

 


ಚಿಕ್ಕಮಗಳೂರು: ಚಿನ್ನದ ವರ್ತಕನನ್ನು ಬೆದರಿಸಿ 10 ಲಕ್ಷ ರೂ. ನೀಡುವಂತೆ ಒತ್ತಾಯಿಸಿ ದರೋಡೆ ಮಾಡಿದ  ಆರೋಪದ ಹಿನ್ನೆಲೆಯಲ್ಲಿ ಅಜ್ಜಂಪುರ ಠಾಣಾಧಿಕಾರಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ದಾವಣಗೆರೆಯ ವರ್ತಕ ಭಗವಾನ್  ನೀಡಿರುವ ದೂರು ಆಧರಿಸಿ ಈ ಕ್ರಮ ಕೈಗೊಂಡಿದ್ದು ಅಜ್ಜಂಪುರ ಠಾಣಾಧಿಕಾರಿ ಲಿಂಗರಾಜು ಮುಖ್ಯ ಆರೋಪಿಯಾಗಿದ್ದಾರೆ.
ಸಕ್ಕರಾಯಪಟ್ಟಣದ ಧನಪಾಲ ನಾಯಕ್ ಕುದುರೆಮುಖದ ಓಂಕಾರ ಮೂರ್ತಿ ಲಿಂಗದಹಳ್ಳಿಯ ಶರತ್ ರಾಜ್ ಉಳಿದ ಆರೋಪಿಗಳು.
ದಾವಣಗೆರೆಯ ಚಿನ್ನದ ವರ್ತಕ ಭಗವಾನ್ ರವರ ಪುತ್ರ ರೋಹಿತ್ ಸುಮಾರು 2 ಕೆಜಿ ಚಿನ್ನದ ಆಭರಣಗಳನ್ನು ಬೇಲೂರಿನ  ವರ್ತಕರು ಒಬ್ಬರಿಗೆ ನೀಡಲು ಕಾರಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ರೋಹಿತ್ ಆಭರಣಗಳೊಂದಿಗೆ ಬರುತ್ತಿದ್ದ ಸಂದರ್ಭದಲ್ಲಿ ಬುಕ್ಕಾಂಬುದಿ ಗೇಟಿನ ಬಳಿ ಇಬ್ಬರು ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ.
ನೆರವಾಗಿ ಕಾರಿನ ಒಳಗೆ ಬಂದು ಕುಳಿತ ಪೊಲೀಸ್ ಸಿಬ್ಬಂದಿ, ಸ್ವಲ್ಪ ದೂರದಲ್ಲಿ ಠಾಣಾಧಿಕಾರಿ ಇದ್ದು ಅಲ್ಲಿಗೆ ಕರೆದುಕೊಂಡು ಹೋಗಿದ್ದಾರೆ.
ಅಲ್ಲಿ ರೋಹಿತ್ ಅನ್ನು ಬಲವಂತವಾಗಿ ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ.
ತಪ್ಪಿದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುವ ಆರೋಪದ ಮೇಲೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಬೆದರಿಸಿದ್ದಾರೆ ಎನ್ನಲಾಗಿದೆ.
ತಾನು ಕಾನೂನು ಬದ್ಧವಾಗಿ ವ್ಯಾಪಾರ ಮಾಡುತ್ತಿದ್ದು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಿದರು ಬಿಡದೆ ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅಂತಿಮವಾಗಿ 5 ಲಕ್ಷ ರೂಗಳಿಗೆ ವ್ಯವಹಾರ ಕುದುರಿದ್ದು ರೋಹಿತ್ ಅಜ್ಜಂಪುರದಲ್ಲಿರುವ ವರ್ತಕರೊಬ್ಬರಿಂದ ಹಣವನ್ನು ಪಡೆದು ಇವರಿಗೆ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರನ್ನು ಆಧರಿಸಿ ತನಿಖೆ ನಡೆಸಿ ಮೇಲ್ನೋಟಕ್ಕೆ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.
ಬೇಲಿಯೇ ಎದ್ದು ಹೊಲ ಮೇದಂತೆ ಆಗಿದ್ದು ಈ ಪ್ರಕರಣ ಇಡೀ ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಆಗಿದೆ.




** ಕುದುರೆಮುಖ ಠಾಣಾಧಿಕಾರಿಯೊಬ್ಬರು ಅಕ್ರಮವಾಗಿ ಚಹಾ ಪುಡಿ ಯನ್ನು ಸಾಗಿಸುತ್ತಿರುವ ದೃಶ್ಯವನ್ನು ದಾಖಲೆ ಸಮೇತ ಗ್ರಹ ಸಚಿವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದೇ ಇಂಥ ಪ್ರಕರಣ ಮರುಕಳಿಸಲು ಕಾರಣ ಎಂದು ಪೊಲೀಸ್ ಇಲಾಖೆಯಲ್ಲಿಯೇ ಮಾತುಗಳು ಕೇಳಿ ಬರುತ್ತಿವೆ

ಮೂಡಿಗೆರೆ ಸಮೀಪ ಕಾಡಾನೆಗೆ ಮಹಿಳೆ ಬಲಿ: ಸ್ಥಳೀಯರ ಅಕ್ರೋಶ

 


ಮೂಡಿಗೆರೆ: ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ.

  45 ವರ್ಷದ ಶೋಭಾ ಅಮೃತ ದುರ್ದೈವಿ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ.

 ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಶೋಭಾ ಮೇಲೆ ಕಾಡಾನೆ ನಡೆಸಿದ್ದು  ಮಹಿಳೆಯ ದೇಹವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ. ಗ್ರಾಮಸ್ಥರು ಭಯ ಬೀತರಾಗಿದ್ದು ಹಾಡು ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ.

 ಕಾಡಾನೆಗಳು ಊರಿನಲ್ಲಿ ಇದ್ದರು ಅರಣ್ಯ ಇಲಾಖೆ ತಿಳಿಸಿದರೆ ಅವುಗಳನ್ನು ಕಾಡಿಗಟ್ಟಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿದ್ಯುತ್ ತಂತಿ ತಗುಲಿ ಬಾಲಕ ಸಾವು: ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ಡಿ.ಕೆ ರಾಜಪ್ಪನವರ ಪುತ್ರ ಶರತ್ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾನೆ.

ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಮೋಟಾರ್ ಪಂಪಿನ ಸ್ಟಾರ್ಟರ್ ಬಾಕ್ಸ್ ಮೇಲೆ ಬಿದ್ದಿತ್ತು. ಬಾಕ್ಸ್ನ ಬೀಗ ತೆಗೆಯಲು ಬಂದಿದ್ದ ಶರತ್ ಗೆ ವಿದ್ಯುತ್ ಆಗಲಿ ಸ್ಥಳದಲ್ಲಿ ಸಾವಪ್ಪಿದ್ದಾನೆ.

ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಹಾಗೂ ವಿಮಾಸಂಸ್ಥೆ ಪ್ರತಿನಿಧಿಗಳು ಭೇಟಿ ನೀಡಿ ಸೂಕ್ತ ಪರಿಹಾರ ನೀಡುವ ಭರವಸೆ ಕೊಟ್ಟಿದ್ದಾರೆ

 

ಶನಿವಾರ, ನವೆಂಬರ್ 19, 2022

ಭಾರಿ ಪ್ರಮಾಣದ ಬಾಡಿಗೆ ಬಾಕಿ: ಕೋಳಿ ಅಂಗಡಿ ಮಳಿಗೆಗಳಿಗೆ ಬೀಗ

 


ಚಿಕ್ಕಮಗಳೂರು ನಗರದ ಸಂತೆ ಮಾರುಕಟ್ಟೆಯ ಒಳಗಿರುವ ಬಾಡಿಗೆ ಹಣ ಕಟ್ಟದ ಕೋಳಿ ಮಳಿಗೆಗಳಿಗೆ ಬೀಗ ಹಾಕಲಾಗಿದೆ.

 ಅನೇಕ ತಿಂಗಳುಗಳಿಂದ ಬಾಡಿಗೆ ಕಟ್ಟದೆ  ಲಕ್ಷ ರೂಗಳಿಗೂ ಹೆಚ್ಚು ಬಾಡಿಗೆ ಬಾಕಿ ಉಳಿದಿದ್ದು  ಅನೇಕ ಬಾರಿ ಹೇಳಿದರೂ ನಗರಸಭೆಗೆ ಬಾಡಿಗೆ ಕಟ್ಟಿಲ್ಲ.

ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್  ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಬಾಡಿಗೆ ನೀಡದೆ ಇರುವ ಮಳಿಗೆಗಳನ್ನು ನಗರಸಭೆಯ ವತಿಯಿಂದ ಬಾಗಿಲು ಮುಚ್ಚಿಸಿ ಬೀಗ ಹಾಕಿಸುವ ಕೆಲಸವನ್ನು ನಡೆಸಿದರು,

      ನಗರಸಭಾ ಎಂಜಿನಿಯರ್ ಚಂದನ್  ಕಂದಾಯ ನಿರೀಕ್ಷಕರಾದ ಶಿವಾನಂದ್, ಜಗದೀಶ್, ಬಿಲ್ ಕಲೆಕ್ಟರ್ ಸಂತೋಷ್, ಪ್ರದೀಪ್, ಸತೀಶ್, ಸೂಪರ್ವೈಸರ್ ಮುರುಗೇಶ್, ಇತರೆ   ಸಿಬ್ಬಂದಿ ಉಪಸ್ಥಿತರಿದ್ದರು.