udayanews

ಬುಧವಾರ, ಮಾರ್ಚ್ 31, 2021

ಪಂಚಾಯಿತಿ ಚುನಾವಣೆ :ಮತ ಎಣಿಕೆ ಪೂರ್ಣ :ವಿಜಯೋತ್ಸವ


 ಚಿಕ್ಕಮಗಳೂರು :ಜಿಲ್ಲೆಯಲ್ಲಿ 32 ಗ್ರಾಮ ಪಂಚಾಯಿತಿಗಳ 257  ಸ್ಥಾನಗಳಿಗೆ ನಡೆದ  ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಪೂರ್ಣಗೊಂಡಿತು .

ಒಟ್ಟು 663 ಅಭ್ಯರ್ಥಿಗಳು  ಕಣದಲ್ಲಿ ಇದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು .

ಚಿಕ್ಕಮಗಳೂರು ಸೇರಿದಂತೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಭರದಿಂದ ಸಾಗಿದ್ದು ಸಿಬ್ಬಂದಿ ನೇಮಕ ಸೇರಿದಂತೆ  ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು .

ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಇದ್ದರೂ ಕೂಡ ಅದನ್ನು ಲೆಕ್ಕಿಸದೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು . ಕೋವಿಡ್ ನಿಯಮಗಳ ವ್ಯಾಪಕ ಉಲ್ಲಂಘನೆಯಾಗಿತ್ತು .

ಗೆದ್ದವರು ಬಿಗಿ ವಿಜಯೋತ್ಸವ ಆಚರಿಸಿದರೆ ,ಸೋತವರು ಸಪ್ಪೆ ಮುಖ ಹಾಕಿಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು .

ಬಸವನಹಳ್ಳಿ ಬಾಲಿಕಾ ಶಾಲೆಯಲ್ಲಿ ಸೋಂಕು ಪತ್ತೆ: ವಿದ್ಯಾರ್ಥಿಗಳಲ್ಲಿ ಆತಂಕ


 ಚಿಕ್ಕಮಗಳೂರು ಇಲ್ಲಿನ ಬಸವನಹಳ್ಳಿ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿ ಯೋರ್ವರಿಗೆ  ಕೊರೊನ ಸೋಂಕು ಪತ್ತೆಯಾಗಿದೆ .

ಇದರಿಂದಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ ಮನೆ ಮಾಡಿದೆ.  ಈ ಶಾಲೆಯಲ್ಲಿ ಒಟ್ಟು 419 ವಿದ್ಯಾರ್ಥಿಗಳು ಇದ್ದು ಅದರಲ್ಲಿ ಇಂದು 284  ವಿದ್ಯಾರ್ಥಿಗಳು  ಹಾಜರಾಗಿದ್ದರು .

ಸೋಂಕು ಪತ್ತೆಯಾಗಿರುವುದು ತಿಳಿದ ತಕ್ಷಣ ಆರೋಗ್ಯ ಇಲಾಖೆ ನೆರವಿನಿಂದ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗಿದೆ .

ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದರೂ ಸೋಂಕು ಪತ್ತೆಯಾಗಿರುವುದು ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕಳವಳ ಮೂಡಿಸಿದ್ದು ಎಲ್ಲಿ   ಪರೀಕ್ಷೆಗಳು ಮುಂದೂಡಲ್ಪಡುತ್ತವೆ' ಶಾಲೆ ಮುಚ್ಚುತ್ತದೆ ಎಂಬ ಹೆದರಿಕೆ ಮನೆಮಾಡಿದೆ .

ಉಳಿದ ಶಾಲೆಗಳಲ್ಲಿಯೂ ಎಚ್ಚರಿಕೆ ವಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ .

ಚಿತ್ರ: ತಾರನಾಥ್ ಕಾಮತ್ 

ಕಾಫಿನಾಡಿನಲ್ಲಿ ಕರೊನಗೆ ಒಂದೇ ಕುಟುಂಬದ ಇಬ್ಬರು ಬಲಿ


 ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನ ೨ ನೇ ಹಂತದ ಅಲೆ ವೇಗವಾಗಿ ಹಬ್ಬುತ್ತಿದೆ ಒಂದೇ ಕುಟುಂಬದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

ನೆಹರು ನಗರದ ಅರುವತ್ತು ವರ್ಷದ ವೃದ್ಧ ಹಾಗೂ ಅವರ ಪತ್ನಿ ಖಾಸಗಿ  ಆಸ್ಪತ್ರೆಗೆ ದಾಖಲಾಗಿದ್ದರು 

ಮೊದಲು ಪತಿ ಹಾಗೂ 1ದಿನದ ಅಂತರದಲ್ಲಿ  ಪತ್ನಿ ಮೃತಪಟ್ಟಿದ್ದಾರೆ . ಈ ಮಧ್ಯೆ ಜಿಲ್ಲೆಯಲ್ಲಿ ಕೊರೋನಾ ತೀವ್ರವಾಗಿ ಹಬ್ಬುತ್ತಿದೆ .

ಜಾತ್ರೆ ಉತ್ಸವ ಸಭೆ ಸಮಾರಂಭಗಳು ಯಾವುದೇ ನಿಯಮಗಳನ್ನು ಪಾಲಿಸದೆ ನಡೆಯುತ್ತಿವೆ .

 ಬಸವನಹಳ್ಳಿಯ ವಿದ್ಯಾರ್ಥಿನಿ ಯೊಬ್ಬರಲ್ಲಿ ಪ್ರಕರಣ  ಬೆಳಕಿಗೆ ಬಂದಿದ್ದು , ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ಒತ್ತಾಯ ಕೇಳಿಬಂದಿದೆ .

ಸೋಮವಾರ, ಮಾರ್ಚ್ 29, 2021

ಅತ್ಯಾಚಾರ ಆರೋಪ :ರಮೇಶ್ ಜಾರಕಿಹೊಳಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ


 ಚಿಕ್ಕಮಗಳೂರು :ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು .

ತಾಲ್ಲೂಕು ಕಚೇರಿ ಆವರಣದಿಂದ ಹನುಮಂತಪ್ಪ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು .

ಮಾಜಿ ಸಚಿವರ ವಿರುದ್ಧ ಅತ್ಯಾಚಾರ ಆರೋಪ  ಪ್ರಕರಣ ದಾಖಲಾಗಿದ್ದರೂ ಈವರೆಗೂ ಅವರನ್ನು ಬಂಧಿಸದೆ ರಕ್ಷಿಸುವ ಯತ್ನ ನಡೆದಿದೆ ಎಂದು ಆರೋಪಿಸಿದರು 

ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡ ಬದಲು ಆಕೆಯನ್ನು ಆರೋಪಿಯಂತೆ ಬಿಂಬಿಸಲಾಗುತ್ತಿದೆ . ಆರೋಪಿ ಸ್ಥಾನದಲ್ಲಿ ಇರುವವರನ್ನು ತಿರುಗಾಡಲು ಬಿಡಲಾಗಿದೆ ಎಂದು ದೂರಿದರು .ಇದರಿಂದ ಸಾಕ್ಷ್ಯಗಳು ನಾಶವಾಗುವ ಅಪಾಯವಿದೆ ಎಂದು ಎಚ್ಚರಿಸಿದರು .

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಅನಗತ್ಯವಾಗಿ ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆದಿದೆ .ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದು ಸಮಗ್ರ ತನಿಖೆಗೆ ಒತ್ತಾಯಿಸಿದರು .


ಕ್ಷೇತ್ರ ಪುನರ್ ವಿಂಗಡನೆ ಪ್ರಸ್ತಾಪ :ವೈಎಸ್ವಿದತ್ತ ತೀವ್ರ ಆಕ್ಷೇಪ


 ಚಿಕ್ಕಮಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾವನೆಗೆ ಮಾಜಿ ಶಾಸಕ ವೈಎಸ್ ವಿ ದತ್ತಾ ತೀರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ .

ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಂದಿನ ಹತ್ತು ವರ್ಷಗಳ ಅವಧಿಗೆಮೀಸಲಾತಿ ನಿಗದಿಪಡಿಸಿ   ಚುನಾವಣಾ ಆಯೋಗ ಈ ಹಿಂದೆ ನಿರ್ಧಾರ ಮಾಡಿತ್ತು ಎಂದರು .

ಸರ್ಕಾರ ಮತ್ತೆ ಈಗ 5ವರ್ಷಗಳಿಗೆ ಸೀಮಿತಗೊಳಿಸಿ ಕ್ಷೇತ್ರಗಳ ಮರು ವಿಂಗಡಣೆಗೆ ಕರಡು ಪ್ರಸ್ತಾವನೆಯನ್ನು ಚುನಾವಣೆ ಆಯೋಗಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ್ದು ಇದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು .

ಸರ್ಕಾರದ ಹಸ್ತಕ್ಷೇಪ ಸರಿಯಲ್ಲ ಎಂದಿರುವ ದತ್ತ ಸರ್ಕಾರದ ಕೈಗೊಂಬೆಯಾಗದೆ  ಚುನಾವಣಾ ಆಯೋಗ ಈ ವಿಷಯದಲ್ಲಿ ಖಡಕ್ ನಿರ್ಧಾರ ಮಾಡಬೇಕಿತ್ತು   ಎಂದಿರುವ ಅವರು ಕಾನೂನಾತ್ಮಕ ಹೋರಾಟ ಅನಿವಾರ್ಯ ಎಂದರು . 

ಛಾಯಾ ಗ್ರಾಹಕರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಲಿ :ರಂಭಾಪುರಿ ಶ್ರೀಗಳು


    ಚಿಕ್ಕಮಗಳೂರು :ದಿನನಿತ್ಯದ ಸುದ್ದಿ ಇನ್ನಿತರ ಚಟುವಟಿಕೆ ಸಭೆ' ಸಮಾರಂಭಗಳಲ್ಲಿ ಭಾಗವಹಿಸಿ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಕಾರ್ಯನಿರ್ವಹಿಸುವ ಛಾಯಾಗ್ರಾಹಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕೆಂದು ರಂಭಾಪುರಿ ಶ್ರೀಗಳು ಅಭಿಪ್ರಾಯಿಸಿದ್ದಾರೆ . ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಛಾಯಾಗ್ರಾಹಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಜನಪ್ರತಿನಿಧಿಗಳು ಇವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಬೇಕೆಂದು ಹೇಳಿದರು .

ಸಂಘದ ಅಧ್ಯಕ್ಷ ಬಿ. ಕೆ. ಜಯಚಂದ್ರ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಜೀವನ್ ಶೆಟ್ಟಿ ಇತರರು ಭಾಗವಹಿಸಿದ್ದರು  .

ಮಾಜಿ ಸಚಿವ ಜಾರಕಿಹೊಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ


 ಚಿಕ್ಕಮಗಳೂರು :ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ .

 ಈ ವಿಷಯವನ್ನು ಗಂಭೀರವಾಗಿ ಚರ್ಚಿಸಿದ ಪಕ್ಷದ ಕಾರ್ಯಕಾರಿಣಿ ಸಭೆ , ಪ್ರಕರಣವನ್ನು ದಿಕ್ಕು ತಪ್ಪಿಸುವ ಯತ್ನ ನಡೆದಿದ್ದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದಿರುವುದನ್ನು ಖಂಡಿಸಿತು .

ಬೆಳಗಾವಿಯಲ್ಲಿ ಡಿ .ಕೆ .ಶಿವಕುಮಾರ್ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವುದನ್ನು ಪಕ್ಷ ಖಂಡಿಸಿತಲ್ಲದೆ  ರಮೇಶ್ ಜಾರಕಿಹೊಳಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಸಭೆ ನಿರ್ಧರಿಸಿತು .

ಪಕ್ಷದ ಜಿಲ್ಲಾ ಅಧ್ಯಕ್ಷ ಅಂಶುಮಂತ್, ಮಾಜಿ ಶಾಸಕರಾದ ಬಿ ಎಲ್ ಶಂಕರ್,ಮೋಟಮ್ಮ , ಗಾಯತ್ರಿಶಾಂತೇಗೌಡ ,ಶ್ರೀನಿವಾಸ್ ಇತರರು ಪಾಲ್ಗೊಂಡಿದ್ದರು .