udayanews

ಬುಧವಾರ, ನವೆಂಬರ್ 30, 2022

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತಕ್ಕೆ ದೂರು

 



ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಜೇಗೌಡ ವಿರುದ್ಧ ಮತ್ತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ

ಕೊಪ್ಪ ಮೂಲದ ದಿನೇಶ್ ಹೊಸೂರು  ದೂರು ಸಲ್ಲಿಸುವ ಮೂಲಕ ಕಾಂಗ್ರೆಸ್ ಶಾಸಕರಿಗೆ ಕಂಟಕವಾಗುತ್ತಾ ಶಬಾನಾ ರಂಜಾನ್ ಸಂಸ್ಥೆ ಎನ್ನುವ ಅನುಮಾನ ಕಾಡುತ್ತಿದೆ

ಟಿ.ಡಿ.ರಾಜೇಗೌಡ 123 ಕೋಟಿಯಷ್ಟು ಅಕ್ರಮ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದೇ ತಿಂಗಳ 18ರಂದು ಕೊಪ್ಪ ಮೂಲದ ವಿಜಯಾನಂದ ದೂರು ನೀಡಿದ್ದು

ದೂರು ದಾಖಲಾದ 4-5 ದಿನದಲ್ಲಿ ಕೇಸ್ ಹಿಂಪಡೆದಿದ್ದರು.

ವಾರ್ಷಿಕ 35 ಲಕ್ಷ ಆದಾಯ ತೋರಿಸಿದ್ದ ರಾಜೇಗೌಡ, 123 ಕೋಟಿ ಆಸ್ತಿ ಖರೀದಿ ಹೇಗೆ ಎಂದು ದೂರಿನಲ್ಲಿ ಪ್ರಶ್ನಿಸಿ ತನಿಖೆಗೆ ಒತ್ತಾಯಿಸಿದ್ದಾರೆ


ಮಂಗಳವಾರ, ನವೆಂಬರ್ 29, 2022

ಕಡೂರು ತಹಸಿಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ -ಗುರು ಶಾಂತಪ್ಪ


 

ಚಿಕ್ಕಮಗಳೂರು: ಮೃತ ವ್ಯಕ್ತಿಯ ಹೆಸರಿಗೆ ಖಾತೆ ಮಾಡಿ ಕೊಟ್ಟಿರುವುದು ಸೇರಿದಂತೆ ಅನೇಕ ಆರೋಪಗಳನ್ನು ಎದುರಿಸುತ್ತಿರುವ ಕಡೂರು ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಗುರು ಶಾಂತಪ್ಪ ಕಡೂರು ತಹಸಿಲ್ದಾರ್ ಉಮೇಶ್ ಬೇರೆಯವರ ಲಾಗಿನ್ ಬಳಸಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ರೈತ ಸಂಘದ ನಿರಂತರ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದರು ಉಪವಿಭಾಗಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಲ್ಲಿ ಮೀನಮೇಶ ಎಣಿಸುತ್ತಿದ್ದಾರೆ ಎಂದು ಟೀಕಿಸಿದರು.

ಈ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ತುರ್ತಾಗಿ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರು ಸೂಚಿಸಿದರು ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳದೆ ಇರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದು  ಆರೋಪಿಸಿದರು.

8 ದಿನದ ಒಳಗೆ ಶಿಸ್ತುಕ್ರಮ ತೆಗೆದುಕೊಳ್ಳದೆ ಹೋದಲ್ಲಿ ಅನಿರ್ದಿಷ್ಟ ಅವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಸಿದರು

ಕೊಪ್ಪ ಸರ್ವೆ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ -ಸಹನೆ ಕಳೆದುಕೊಂಡ ಜನರಿಂದ ಪ್ರತಿಭಟನೆ

 



ಕೊಪ್ಪ :ಇಲ್ಲಿನ ಭೂ ದಾಖಲೆಗಳ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಆರೋಪಿಸಿ ನೊಂದವರು ಪ್ರತಿಭಟನೆ ನಡೆಸಿದ್ದಾರೆ.

 ಸಹಾಯಕ ನಿರ್ದೇಶಕರ ಕಚೇರಿ ಬಾಗಿಲ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದೆ ಅಲ್ಲದೆ ಒಂದು ಹಂತದಲ್ಲಿ ಬೀಗ ಹಾಕಲು ಹೊರಟಿದ್ದರು.

ದಾಖಲೆಗಳನ್ನು ಪಡೆಯಲು ತಿಂಗಳಗಟ್ಟಲೆ ಅಲೆಯಬೇಕಾಗಿದೆ. ಹಣವಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಅಧಿಕಾರಿ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಸಮಾಧಾನ ಪಡಿಸಲು ಮಾಡಿದ ಯತ್ನ ಫಲಿಸದೆ ಅವರ ಎದುರಿನಲ್ಲಿ ಪ್ರತಿಭಟನೆ ನಿರತರು ಇಲಾಖೆ ವಿರುದ್ಧ ಕೂಗಾಡಿದರು.

ಭ್ರಷ್ಟಾಚಾರ -ಪರ್ಸೆಂಟೇಜ್ ವ್ಯವಹಾರ ಬಿಜೆಪಿ ಸರ್ಕಾರದ ಸಾಧನೆ:ಡಿ.ಕೆ.ಶಿವಕುಮಾರ್

 

ಮೂಡಿಗೆರೆ:ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು  ಪರ್ಸಂಟೇಜ್ ವ್ಯವಹಾರ ಹೊರತುಪಡಿಸಿ ಜನಪರವಾಗಿ ಕೆಲಸ ಮಾಡಿಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ

     ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ  ಸಮಾವೇಶ ಉದ್ಘಾಟಿಸಿ ಬಿಜೆಪಿ ೩ ಬಾರಿ ನಡೆಸಿದ ಆಡಳಿತದಲ್ಲಿ ಜನರ ಬದುಕು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ.   ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ ಎಂದರು.

  ಇಲ್ಲಿಯವರೆಗೆ ಅಧಿಕಾರವಿದ್ದಾಗಲೇ ಜನರ ಬದುಕು ಹಸನು ಮಾಡಲು ಸಾಧ್ಯವಾಗಿಲ್ಲ. ಇನ್ನು ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ  ಸಾಧ್ಯವೇ ಎಂದು ಪ್ರಶ್ನಿಸಿದರು.  

  ಬಿಜೆಪಿ  ಕೇವಲ ಭಾವನೆ, ಕೋಮು ಗಲಭೆಯಲ್ಲೇ ಕಾಲ ಕಳೆದಿದ್ದಾರೆ. ಜನರ ಬದುಕು ಹಸನಾಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ  ನ ಯಾವುದೇ ಅಭ್ಯರ್ಥಿ  ನಿಲ್ಲಿಸಿದರೂ ಅವರನ್ನು ಗೆಲ್ಲಿಸಿಕೊಡುವ ಕರ್ತವ್ಯ ನಿಮ್ಮದು ಎಂದು ಹೇಳಿದರು. 

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್  ಮಾತನಾಡಿ ಫ್ಲೆಕ್ಸ್ ಹಾಕುವ ಬದಲು ಜನ ಸಂಪರ್ಕ ಮಾಡುವುದು ಒಳಿತು ಎಂದು ಕಿವಿ ಮಾತು ಹೇಳಿದರು


ಮಾಜಿ ಸಚಿವರಾದ ಮೋಟಮ್ಮ, ಬಿ.ಶಿವರಾಂ, ಕಾರ್ಯಧ್ಯಕ್ಷ ದೃವ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶು ಮಂತ್ ಇತರರು ಉಪಸ್ಥಿತರಿದ್ದರು. 

ನಾಗರತ್ನ ಮತ್ತು ನಯನ ಮೋಟಮ್ಮ ಪರ ಪ್ರತ್ಯೇಕವಾಗಿ ಭಾರಿ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ಗುಂಪುಗಾರಿಕೆ ಬಿಂಬಿತಗೊಂಡಿತು.

ಸೋಮವಾರ, ನವೆಂಬರ್ 28, 2022

ಖಾಸಗಿ ಬಸ್ -ಟಿಪ್ಪರ್ ನಡುವೆ ಮುಖಾಮುಖಿ. ಓರ್ವ ಮಹಿಳೆ ಮೃತಪಟ್ಟು15 ಮಂದಿಗೆ ಗಾಯ

 


ಚಿಕ್ಕಮಗಳೂರು : ಖಾಸಗಿ ಬಸ್ -ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ
ಓರ್ವ ಮಹಿಳೆ  ಮೃತಪಟ್ಟು15 ಮಂದಿಗೆ ಗಾಯವಾಗಿದೆ
ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಘಟನೆ ನಡೆದಿದ್ದು ,ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ  ಸಾವಪ್ಪಿದ್ದಾರೆ
ಗಾಯಾಳುಗಳನ್ನುಎನ್.ಆರ್ ಪುರ ಹಾಗೂ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

250 ಕೋಟಿ ಬೆಲೆಗೆ ಜೀವರಾಜ್ ರವರೇ ಜಮೀನು ಖರೀದಿಸಲಿ :ಶಾಸಕ ರಾಜೇಗೌಡ ಸವಾಲು -ತನಿಖೆಗೆ ಸಿದ್ದ ಇರುವುದಾಗಿ ಘೋಷಣೆ

 


ಚಿಕ್ಕಮಗಳೂರು: ತಾವು ಬಾಳೆಹೊನ್ನೂರು ಬಳಿ ಖರೀದಿಸಿರುವ  ಜಮೀನನ್ನು 250 ಕೋಟಿಗೆ ಜೀವರಾಜ್ ರವರು ಖರೀದಿಸುವುದಾದರೆ ಸಂತೋಷದಿಂದ ಕೊಡುವುದಾಗಿ ಶೃಂಗೇರಿ ಶಾಸಕ ಟಿ.ಡಿ .ರಾಜೇಗೌಡ ಸವಾಲು ಹಾಕಿದ್ದಾರೆ.
ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಸರಿಸುಮಾರು 20 ಕೋಟಿ ರೂ.ಗಳಿಗೆ ಜಮೀನನ್ನು ಖರೀದಿಸಿದ್ದು ಯಾವುದೇ ರೀತಿಯ ಅವ್ಯವಹಾರ ಕಾನೂನು ಬಾಹಿರ ಕೃತ್ಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಮೀನು ಖರೀದಿ ನಮ್ಮ ಮತ್ತು ಸಿದ್ಧಾರ್ಥ ಕುಟುಂಬದ ನಡುವಿನ ವ್ಯವಹಾರ. ಅದು ಕಾಯ್ದೆ ಮತ್ತು ಕಾನೂನು ಚೌಕಟ್ಟಿನಲ್ಲಿ ಅಡಿಯಲ್ಲಿಯೇ ನಡೆದಿದೆ.ಈಗಾಗಲೇ ಸಿದ್ದಾರ್ಥ ಅವರ ಪತ್ನಿ ಮಾಳವಿಕಾರವರು ಕೂಡ ಸ್ಪಷ್ಟನೆ ನೀಡಿದ್ದಾರೆ ಎಂದರು.
ಲೋಕಾಯುಕ್ತಕ್ಕೆ  ತಮ್ಮ ವಿರುದ್ಧ ದೂರು ನೀಡಿದ ಬಗ್ಗೆ ಅಧಿಕೃತವಾಗಿ  ಮಾಹಿತಿ ಬಂದಿಲ್ಲ. ಹೀಗಾಗಿ ಸ್ಪಷ್ಟನೆಯನ್ನು ಕೊಟ್ಟಿರಲಿಲ್ಲ. ಆದರೆ ಕೊಪ್ಪಕ್ಕೆ ಬಂದ ಮುಖ್ಯಮಂತ್ರಿಗಳಾಗಿ ಎಲ್ಲರೂ ಈ ವಿಷಯವನ್ನು ಚರ್ಚಿಸುತ್ತಿರುವುದರಿಂದ ಸ್ಪಷ್ಟನೆ ನೀಡುತ್ತಿರುವುದಾಗಿ ಹೇಳಿದರು.
ಲೋಕಾಯುಕ್ತ ಸೇರಿದಂತೆ ಯಾವುದೇ ರೀತಿಯ ತನಿಖಾ ಸಂಸ್ಥೆಯಿಂದ ತನಿಖೆ ನಡೆದರು ತಾವು ಎದುರಿಸಲು ಸಿದ್ಧ . ಈ ಹಿಂದೆಯೂ ತಮ್ಮ ಹಾಗೂ ತಮ್ಮ ಬೆಂಬಲಿಗರ ವಿರುದ್ಧ ಹಲವು ರೀತಿಯ ತನಿಖೆಗಳು ಆಗಿವೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಸೋತು ಹತಾಶರಾಗಿರುವ ಡಿ .ಎನ್ ಜೀವರಾಜ್ ಗೆ ಒಂದೊಮ್ಮೆ ರಾಜಕೀಯ ಕಾರ್ಯದರ್ಶಿ ಸ್ಥಾನ ಸಿಗದೇ ಹೋಗಿದ್ದರೆ ಮಾನಸಿಕವಾಗಿ ಅಸ್ವಸ್ಥರಾಗುತ್ತಿದ್ದರು ಎಂದು ವ್ಯಂಗ್ಯವಾಡಿದರು.
ಜೀವರಾಜ್ ಮೇಲೆ ಇರುವಂತೆ ತಮ್ಮ ವಿರುದ್ಧ ಯಾವುದೇ ಆಪಾದನೆಗಳು ಇಲ್ಲ .ತನಿಖೆಗಳು ನಡೆಯುತ್ತಿಲ್ಲ ಪತ್ರಿಕೆಗಳಲ್ಲಿ ಸುದ್ದಿ ಬಾರದಂತೆ ತಡೆ ಆಜ್ಞೆಯನ್ನು ತಂದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.
ತಮ್ಮ ವಿರುದ್ಧ ಭ್ರಷ್ಟಾಚಾರ ಸುಳ್ಳುಆಪಾದನೆ ಹೊರಿಸುತ್ತಿರುವ ಜೀವರಾಜ್ ಬಹುಶಃ ಅವರ ಅಧಿಕಾರ ಅವಧಿಯಲ್ಲಿ ಅದನ್ನೇ ಮಾಡಿದ್ದಾರೆ ಎಂದು ಟೀಕಿಸಿದರು.

ಕಾಡಾನೆ ಸೆರೆ ಕಾರ್ಯಾಚರಣೆ ; ಆರಂಭಿಕ ಗೆಲುವು- ಒಂದು ಆನೆ ಸೆರೆ



ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇತ್ತೀಚಿಗೆ ಮಹಿಳೆಯೊಬ್ಬರನ್ನು ಬಲಿ ತೆಗೆದುಕೊಂಡಿದ್ದ ಆನೆ ಕೊನೆಗೂ ಸೆರೆಯಾಗಿದೆ

ಕಾಡಾನೆ ಸೆರೆ ಹಿಡಿಯುವಂತೆ ಸ್ಥಳೀಯರು ಮತ್ತು ಜನಪ್ರತಿನಿಧಿಗಳ ನಿರಂತರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಕಾಡಾನೆ ಸೆರೆಗೆ ಆದೇಶ ಹೊರಡಿಸಿತ್ತು.

6 ಆನೆಗಳೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಸಿಬ್ಬಂದಿ ಮೊದಲ ಹಂತದಲ್ಲಿ ಯಶಸ್ವಿಯಾಗಿದ್ದು ಬೆಳಗೋಡಿನ ಕುಂಡರ ಕಾಡು ಎಂಬಲ್ಲಿ ಆನೆಯೊಂದನ್ನು ಸೆರೆ ಹಿಡಿಯಲಾಗಿದೆ.

ಆನೆ ಸೆರೆಹಿಡಿದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸ್ಥಳೀಯರು ಈ ಭಾಗದಲ್ಲಿ ಇನ್ನಷ್ಟು ಆನೆಗಳು ಇದ್ದು ಅವುಗಳನ್ನು ಸೆರೆ ಹಿಡಿಯಬೇಕೆಂಬ ಒತ್ತಾಯ ವ್ಯಕ್ತಪಡಿಸಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆನೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ. ಹಿಡಿದಿರುವ ಆನೆಯನ್ನು ಎಲ್ಲಿಗೆ ಸಾಗಿಸುವುದು ಎನ್ನುವ ಸಮಾಲೋಚನೆಯು ನಡೆದಿದೆ